ಮಾ.4: ಶಾಂತಿನಗರದಲ್ಲಿ 35ನೇ ವರ್ಷದ ಸತ್ಯನಾರಾಯಣ ಪೂಜೆ, ಮಾಯಾ ಮ್ಯಾಜಿಕ್

0

ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಪೂಜಾ ಮೈದಾನದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ 35ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ವೃತ ಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮಾ.4ರಂದು ನಡೆಯಲಿದೆ.

ಬೆಳಿಗ್ಗೆ ಪೂಜಾ ಕಟ್ಟೆಯಲ್ಲಿ ಗಣಹೋಮ, ಸಂಜೆ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ, ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಚಲನಚಿತ್ರ ಹಂಚಿಕೆದಾರ ಕುಕ್ಕಾಡಿ ಬಾಲಕೃಷ್ಣ ಶೆಟ್ಟಿ ಸಂಯೋಜಕತ್ವದಲ್ಲಿ ಕೊಡಗಿನ ಮ್ಯಾಜಿಕ್ ಸ್ಟಾರ್ ಜಾದೂಗಾರ್ ವಿಕ್ರಂ ಶೆಟ್ಟಿಯವರಿಂದ ಮಾಯಾ ಮ್ಯಾಜಿಕ್ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here