![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ ಮಾ.11ರಂದು ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
![](https://puttur.suddinews.com/wp-content/uploads/2023/03/dea4b689-a278-42bb-b7e2-0db2573d5bcc.jpg)
ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶಾಭಿಷೇಕ, ಸೀಯಾಳಾಭಿಷೇಕ, ನಾಗಸನ್ನಿಧಿಯಲ್ಲಿ ಆಶ್ಲೇಷ ಬಲಿ, ನಾಗತಂಬಿಲ, ಮಹಾಪೂಜೆ, ಸಂಜೆ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ವೇ.ಮೂ.ಬಾಲಕೃಷ್ಣ ಕೆದಿಲಾಯ ಕೊಕ್ಕಡರವರು ಪೂಜಾ ವಿಧಾನ ನೆರೆವೇರಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀಪತಿ ಬೈಪಾಡಿತ್ತಾಯ, ಆಡಳಿತ ಸಮಿತಿ ಗೌರವಾಧ್ಯಕ್ಷ ಡಾ.ಅಶೋಕ್ ಪಡಿವಾಳ್ ಮೂಡಾಯೂರು ಗುತ್ತು, ಶ್ರೀಧರ ಬೈಪಾಡಿತ್ತಾಯ, ಶ್ರೀಮಹಾವಿಷ್ಣುಮೂರ್ತಿ ಭಜನಾ ಮಂಡಳಿ ಅಧ್ಯಕ್ಷೆ ಉಮಾವತಿ ಹೊನ್ನಪ್ಪ ಗೌಡ, ಕಾರ್ಯದರ್ಶಿ ಅಶೋಕ್ ಹೆಚ್., ಸದಾಶಿವ ಹೊಳ್ಳ ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/03/97c6d0f4-24b1-4eaf-9323-e2cc0c6486bf.jpg)
ನಾಟಕ ಪ್ರದರ್ಶನ:
ಬೊಳ್ಳಿ ಸಂಸಾರ ಕಲಾವಿದೆರ್ ಪುತ್ತೂರು ತಂಡದಿಂದ ” ಭಾಗ್ಯ ಬೋಡು ” ತುಳು ನಾಟಕ ಪ್ರದರ್ಶನಗೊಂಡು ಮನರಂಜಿಸಿತು