ಅತ್ಯಾಚಾರ ಪ್ರಕರಣ:ವಾರಂಟ್ ಆರೋಪಿಯನ್ನು ಬಂಧಿಸಿದ ಮಹಿಳಾ ಠಾಣಾ ಪೊಲೀಸರು

0

ಪುತ್ತೂರು:ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಮಚ್ಚಿಮಲೆಯ ಉದಯ ಯಾನೆ ಉದಯ ಕುಮಾರ್ ಎಂಬಾತನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

2022ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಉದಯ ಯಾನೆ ಉದಯ್ ಕುಮಾರ್ ಅವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 417, 376, 506ರಡಿ ಪ್ರಕರಣ ದಾಖಲಾಗಿತ್ತು.

ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ವಾರಂಟ್ ಜಾರಿಯಾಗಿತ್ತು.ಪುತ್ತೂರು ಮಹಿಳಾ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ -ಜುಲ್ಲಾ ಎಂ.ಡಿ ಮತ್ತು ಎಸ್.ಐ ಗಾಯತ್ರಿ ಅವರ ಮಾರ್ಗದರ್ಶನದಲ್ಲಿ ಹೆಡ್‌ಕಾನ್‌ಸ್ಟೇಬಲ್ ಧರ್ಮಪಾಲ ಕೆ, ಜಯಶ್ರೀ, ದಿವ್ಯಾ ಮತ್ತು ದಿವಾಕರ ಅವರು ಆರೋಪಿಯನ್ನು ಬಂಟ್ವಾಳದ ಮಾರಾಯಿತೊಟ್ಟು ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here