ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹಿತ್ತಾಳೆಯ ಹೊದಿಕೆ ಸಮರ್ಪಣೆ ಕಾರ್ಯಕ್ರಮ

0

ಗುರುಗಳ ಪ್ರೇರಣೆ, ಭಕ್ತರಿಂದ ಸಮರ್ಪಣೆ – ಎಡನೀರು ಶ್ರೀ

ಪುತ್ತೂರು: ಬದುಕಿನ ಕತ್ತಲೆಯನ್ನು ಹೋಗಲಾಡಿಸಿ ಬೆಳಕು ತೋರುವಂಥ ಗುರುಗಳ ಪ್ರೇರಣೆಯಿಂದ ಭಕ್ತರು ಸಮರ್ಪಣೆ ಮಾಡಿರುವುದು ಕ್ಷೇತ್ರ ಸಾನಿಧ್ಯವನ್ನು ಹೇಳುತ್ತಿದೆ ಎಂದು ಎಡನೀರು ಶ್ರೀ ಸಚ್ಚಿದಾನಂದ ಶ್ರೀಪಾದಂಗಳವರು ನುಡಿದರು.

ಮಾ.13ರಂದು ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗರ್ಭಗುಡಿಗೆ ಹಿತ್ತಾಳೆಯ ಹೊದಿಕೆ ಸಮರ್ಪಣೆ ಸಭಾ ಕಾರ್ಯಕ್ರಮದಲ್ಲಿ ಅವರು ಅಶೀರ್ವಚನ ನೀಡಿದರು. ಶಾಸಕ ಸಂಜೀವ ಮಠಂದೂರು, ಟ್ರಸ್ಟಿಗಳಾದ ಯನ್.ಸುಬ್ರಹ್ಮಣ್ಯಂ ಕೊಳತ್ತಾಯ, ಬೆಟ್ಟ ಈಶ್ವರ ಭಟ್, ಗಣಪತಿ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗರ್ಭಗುಡಿಗೆ ಹಿತ್ತಾಳೆ ಹೊದಿಕೆ ಸಮರ್ಪಣೆಗೆ ಸಹಕಾರ ನೀಡಿದ ದಾನಿಗಳನ್ನು ಎಡನೀರು ಶ್ರೀಗಳು ಗೌರವಿಸಿದರು. ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಕಾರ್ಯದರ್ಶಿ ಯು.ಪೂವಪ್ಪ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಟ್ರಸ್ಟಿ ಯು.ಲೋಕೇಶ್ ಹೆಗ್ಡೆ ವಂದಿಸಿದರು. ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು. ಬೆಳಿಗ್ಗೆ ವೈದಿಕ ಕಾರ್ಯಕ್ರಮ, ಕಲಶ ಪ್ರತಿಷ್ಠೆ, ಪ್ರಧಾನ ಹೋಮ, ಕಲಶಾಭಿಷೇಕ, ಪ್ರಸನ್ನಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಮಾ.14ರಂದು ಬೆಳಿಗ್ಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

LEAVE A REPLY

Please enter your comment!
Please enter your name here