![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪ್ರತಿ ಸಂಕ್ರಾಂತಿಗೆ ದೀಪ ಸೇವೆ, ಭಾನುವಾರ ಅಗೇಲು ಸೇವೆ-ಬಾಬು ಪೂಜಾರಿ
ಪುತ್ತೂರು:ಶತಮಾನಗಳಿಂದ ತಾಯಿ ಉಳ್ಳಾಲ್ತಿ ಅಮ್ಮನವರ ದೂತನಾಗಿ ಆರಾಧಿಸಿಕೊಂಡು ಬರುತ್ತಿರುವ ಬಲ್ನಾಡು ಗ್ರಾಮದ ಉಜ್ರುಪಾದೆ ಕಾರಣಿಕದ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಮಾ.11ರಂದು 4ನೇ ವರ್ಷದ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಿತು.
ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ 2019ರ ಜುಲೈ 7 ಮತ್ತು 8 ರಂದು ನಡೆದಿದೆ. ಆ ಬಳಿಕ ಕ್ಷೇತ್ರದಲ್ಲಿ ಪ್ರತಿ ಸಂಕ್ರಾಂತಿಗೆ ದೀಪ ಸೇವೆ ಹಾಗೂ ಪ್ರತಿ ಭಾನುವಾರ ಅಗೇಲು ಸೇವೆ ನಡೆಯುತ್ತಿದೆ. ಹರಕೆ ಕೋಲ ಹಾಗೂ ಇತರ ಸೇವೆಗಳನ್ನು ನಡೆಸಲು ಅವಕಾಶವಿದೆ. ಬೆಳಗ್ಗೆ ಸ್ಥಳ ಶುದ್ಧಿ, ಗಣಹೋಮ, ಕಲಶಾಭಿಷೇಕ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗಂಟೆ 7ಕ್ಕೆ ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಿತು.
ಮುಂದಿನ ವರ್ಷ 5ನೇ ವರ್ಷದ ನೇಮೋತ್ಸವವನ್ನು ಅದ್ದೂರಿಯಾಗಿ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಕ್ಷೇತ್ರದಲ್ಲಿ ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ಪಾಕ ಶಾಲೆ, ಆವರಣಗೋಡೆ, ಕೊಠಡಿಗಳ ನಿರ್ಮಾಣ ಮತ್ತು ಇತರ ಸೌಲಭ್ಯಗಳನ್ನು ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಕ್ಷೇತ್ರದ ಮೊಕ್ತೇಸರ ಕೆ. ಬಾಬು ಪೂಜಾರಿ ಬಲ್ನಾಡು ತಿಳಿಸಿದರು. ಕ್ಷೇತ್ರದ ಕಾರ್ಯದರ್ಶಿ ಯತೀಶ್ ಕುಮಾರ್ ಬಿ.ಕೆ., ಕೋಶಾಽಕಾರಿ ಗೌತಮ ಹಾಗೂ ಕೊರಗಜ್ಜ ದೈವದ ಭಕ್ತಾದಿಗಳು ಉಪಸ್ಥಿತರಿದ್ದರು.