ನಾಳೆ(ಮಾ.28)ಚೆಲ್ಯಡ್ಕ ಆಳ್ವರ ಮನೆಯಲ್ಲಿ ಕಟೀಲು ಮೇಳದವರಿಂದ ‘ಶ್ರೀದೇವಿ ಮಹಾತ್ಮೆʼ ಯಕ್ಷಗಾನ ಬಯಲಾಟ

0

ವಿನಯ ಕುಮಾರ್ ಸೊರಕೆ, ರಮಾನಾಥ ರೈ, ಮಂಜುನಾಥ ಭಂಡಾರಿ, ಹರೀಶ್ ಪೂಂಜ, ಸಂಜೀವ ಮಠಂದೂರು ಆಗಮನ

ಪುತ್ತೂರು: ರಾಜಕೀಯ, ಸಾಮಾಜಿಕ ಮುಂದಾಳುವಾಗಿರುವ ಕೃಷ್ಣಪ್ರಸಾದ್ ಆಳ್ವರವರ ನಿವಾಸ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಆಳ್ವರ ಮನೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರ ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಶ್ರೀದೇವಿ ಮಹಾತ್ಮೆ’ ಎಂಬ ಸೇವಾ ರೂಪದ ಯಕ್ಷಗಾನ ಬಯಲಾಟವು ಮಾ.28ರಂದು ಸಂಜೆ ನಡೆಯಲಿದೆ.

ಸಂಜೆ 5.30ಕ್ಕೆ ಚೌಕಿ ಪೂಜೆಯ ಬಳಿಕ ಯಕ್ಷಗಾನ ಪ್ರಾರಂಭಗೊಳ್ಳಲಿದೆ. ರಾತ್ರಿ 8.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ಅನಂತ ಅಸ್ರಣ್ಣರವರಿಗೆ ಗೌರವಾರ್ಪಣೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪುತ್ತೂರು ಶಾಸಕ ಸಂಜೀವ ಮಠಂದೂರು ಸಹಿತ ಹಲವು ಮಂದಿ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕೃಷ್ಣಪ್ರಸಾದ್ ಆಳ್ವ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here