ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಜ್ರುಪಾದೆ ಶಾಖಾ ಕಟ್ಟಡಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಧನ ಸಹಾಯ

0

ಪುತ್ತೂರು: ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಜ್ರುಪಾದೆ ಶಾಖಾ ಕಚೇರಿ ನೂತನ ಕಟ್ಟಡ ಖರೀದಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಧನ ಸಹಾಯದ ಚೆಕ್ ಬ್ಯಾಂಕ್‌ನ ನಿರ್ದೇಶಕ ಶಶಿ ಕುಮಾರ್ ರೈ ಬಾಲ್ಯೊಟ್ಟುರವರು ಸಂಘದ ಕಛೇರಿಗೆ ಭೇಟಿ ನೀಡಿ ಸಂಘದ ಅಧ್ಯಕ್ಷ ಸತೀಶ್ ಗೌಡರವರಿಗೆ ಹಸ್ತಾಂತರಿಸಿದರು.

ಚೆಕ್ ಸ್ವೀಕರಿಸಿದ ಸಂಘದ ಅಧ್ಯಕ್ಷ ಸತೀಶ್ ಗೌಡ ಮಾತನಾಡಿ, ಸಂಘದ ಶಾಖಾ ಕಟ್ಟಡಕ್ಕೆ ಧನಸಹಾಯ ನೀಡಿ ಸಹಕರಿಸಿದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಿದರು.

ಸಹಕಾರಿ ಸಂಘದ ನಿರ್ದೇಶಕರಾದ ಎ.ಎಂ ಪ್ರವೀಣಚಂದ್ರ ಆಳ್ವ, ಎ.ಎಂ ಪ್ರಕಾಶಚಂದ್ರ ಆಳ್ವ ಹಾಗೂ ಚಂದಪ್ಪ ಪೂಜಾರಿ ಕಾಡ್ಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಗೌಡ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here