ವಿಟ್ಲ: ಮಾಲಕನ ಮನೆಯಿಂದ ಕಳವುಗೈದ ಕೆಲಸದಾಳುವಿನ ಬಂಧನ

0

ವಿಟ್ಲ : ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೋರ್ವ ತನ್ನ ಮಾಲಕನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ನಡೆಸಿದ ಪ್ರಕರಣ ವಿಟ್ಲ ಕಸಬ ಗ್ರಾಮದ ರಂಗರಮಜಲು ಎಂಬಲ್ಲಿ ನಡೆದಿದ್ದು, ಪ್ರಕರಣದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮನು ಅಲಿಯಾಸ್ ಮನೋಹರ ಬಂಧಿತ ಆರೋಪಿಯಾಗಿದ್ದಾರೆ.

ವಿಟ್ಲ ಕಸಬ ಗ್ರಾಮದ ರಂಗರಮಜಲು ಮುರಳಿಧರರವರ ಮನೆಯಲ್ಲಿ ಜ 20 ರಿಂದ ಮಾ 20 ರವರೆಗೆ ಯಾರೂ ಇರಲಿಲ್ಲ. ಈ ಸಂದರ್ಭವನ್ನು ಬಳಸಿಕೊಂಡ ಆರೋಪಿಯು ಒಟ್ಟು 3,20,000 ಮೌಲ್ಯದ ಒಟ್ಟು 64 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನಗೈದಿದ್ದ. ಈ ಬಗ್ಗೆ ಮುರಳಿಧರರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

LEAVE A REPLY

Please enter your comment!
Please enter your name here