ವಿಧಾನಸಭಾ ಚುನಾವಣೆ ಹಿನ್ನೆಲೆ – ಗಡಿಪ್ರದೇಶದ ಚೆಕ್ ಪೋಸ್ಟ್ ಗಳಿಗೆ ಅಧಿಕಾರಿಗಳ ತಂಡ ಭೇಟಿ – ಪರಿಶೀಲನೆ

0

ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಡಿಭಾಗದ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ. ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಅಮಟೆ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಟ್ಲ ಠಾಣಾ ವ್ಯಾಪ್ತಿಯ ಸಾರಡ್ಕ, ಕನ್ಯಾನ, ಆನೆಕಲ್ಲು, ಮೊದಲಾದ ಕಡೆಗಳಿಗೆ ಜಂಟಿಯಾಗಿ ಸಿಬ್ಬಂದಿಗಳ ಜತೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಕರ್ನಾಟಕ-ಕೇರಳ ಭಾಗದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿ, ತಪಾಸಣೆ ಕಾರ್ಯ ಬಿಗಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿಟ್ಲ ಠಾಣಾ ವ್ಯಾಪ್ತಿಗೆ ಪುತ್ತೂರು ಮತ್ತು ಬಂಟ್ವಾಳ ಎರಡು ವಿಧಾನ ಸಭಾ ಕ್ಷೇತ್ರಗಳು ಬರುವುದರಿಂದ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕರ್ನಾಟಕ ಕೇರಳ ಗಡಿ ಭಾಗ ಇರುವುದರಿಂದ ಹೆಚ್ಚಿನ ತಪಾಸಣೆ ನಡೆಸುವಂತೆ ಅಧಿಕಾರಿಗಳು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here