ಏ.10: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಆರಾಧನಾ ಸಮಿತಿ ಕುರಿಯ ಮಾಡಾವು ಏಳ್ನಾಡುಗುತ್ತು ಇವರಿಂದ ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ ಕುರಿಯ ಮಾಡಾವು ಏಳ್ನಾಡುಗುತ್ತು ಇವರಿಂದ ಶ್ರೀ ದೇವರ ಜಾತ್ರೋತ್ಸವದ ಧ್ವಜಾರೋಹಣದ ಶುಭ ದಿನವಾದ ಏ.10 ರಂದು ಪೂರ್ವಶಿಷ್ಠ ಪದ್ಧತಿಯಂತೆ ಕುರಿಯ ಮಾಡಾವು ಏಳ್ನಾಡುಗುತ್ತು ಮನೆತನದ ಶ್ರೇಯಸ್ಸು ಹಾಗೂ ಗೌರವಾರ್ಥವಾಗಿ ಮಹಾಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಕುಟುಂಬದ ಶ್ರೇಯಸ್ಸಿಗಾಗಿ ವಿಶೇಷ ಪೂಜೆ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗುವ ಮೂಲಕ ಶ್ರೀ ದೇವರ ಗಂಧ ಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸುವಂತೆ ದೇವರ ಆರಾಧನಾ ಸಮಿತಿ ಕುರಿಯ ಮಾಡಾವು ಏಳ್ನಾಡುಗುತ್ತು ಇದರ ಗೌರವಾಧ್ಯಕ್ಷ ಕೆ.ಎಂ.ವಿಶ್ವನಾಥ ರೈ ಮಾಡಾವು, ಸಂಚಾಲಕ ಕೆ.ಸೀತಾರಾಮ ರೈ ಕುರಿಯ, ಅಧ್ಯಕ್ಷ ಎಂ.ಬಿ.ಚೆನ್ನಪ್ಪ ರೈ ಬಳಜ್ಜ, ಪ್ರಧಾನ ಕಾರ್ಯದರ್ಶಿ ಎಸ್.ಮಾಧವ ರೈ ಕುಂಬ್ರ, ಜತೆ ಕಾರ್ಯದರ್ಶಿ ಸತೀಶ್ ರೈ ಕುರಿಯ, ಕೋಶಾಧಿಕಾರಿ ಜಯಶೀಲ ರೈ ಕುರಿಯ ಹಾಗೂ ಸರ್ವ ಸದಸ್ಯರುಗಳು ಮತ್ತು ಕುರಿಯ ಮಾಡಾವು ಏಳ್ನಾಡುಗುತ್ತು ಕುಟುಂಬಸ್ಥರು ಹಾಗೂ ಬಂಧು ಮಿತ್ರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here