ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಎ.7ರಂದು ಹುಲಿಭೂತ ದೈವದ ನೇಮ ನಡೆಯುವುದರೊಂದಿಗೆ ವರ್ಷಾವಧಿ ಜಾತ್ರೋತ್ಸವವು ಸಂಪನ್ನಗೊಂಡಿತು.
ಎ.6ರಂದು ರಾತ್ರಿ ಕಾರ್ತಿಕಪೂಜೆ ನಡೆದು, ದೈವದ ಭಂಡಾರ ತೆಗೆದು ಪ್ರಸಾದ ವಿತರಣೆ ನಡೆಯಿತು.
ಎ.7ರಂದು ಬೆಳಗ್ಗೆ ಹುಲಿಭೂತ ದೈವದ ವರ್ಷಾವಧಿ ನೇಮೋತ್ಸವ ನಡೆದು ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ರಕ್ತೇಶ್ವರಿ ದೈವಕ್ಕೆ ತಂಬಿಲ, ಶ್ರೀ ದೇವರಿಗೆ ಕಾರ್ತಿಕ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಊರಪರವೂರ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.