ಕಡಬ ಗ್ರಾ.ಅ.ಯೋಜನಾ ಕಚೇರಿಗೆ ಗುರಿಮೀರಿದ ಸಾಧನೆ, ಸಿಬ್ಬಂದಿಗಳಿಗೆ ಅಭಿನಂದನೆ

0

ಪುತ್ತೂರು: 2022-23 ಸಾಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ಯೋಜನಾ ಕಛೇರಿಯು ಕ್ರಿಯಾಯೋಜನೆಯನ್ವಯ ಎಲ್ಲಾ ವಿಭಾಗಗಳಲ್ಲೂ ಗುರಿ ಮೀರಿದ ಸಾಧನೆ ಮಾಡಿದೆ. ಈ ಸಾಧನೆಗೆ ಕಾರಣಕರ್ತರಾದ ಎಲ್ಲಾ ಸಿಬ್ಬಂದಿಗಳನ್ನು ಅಭಿನಂದಿಸಲಾಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿ ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರುರವರು ಯೋಜನೆಯ ಸಿಬ್ಬಂದಿಗಳನ್ನು ಅಭಿನಂದಿಸಿ,ಶುಭಾಶಯ ಕೋರಿದರು. ಪ್ರಮೋದ್ ರೈ ನೂಜಾಜೆ ಉಪಸ್ಥಿತರಿದ್ದರು. ತಾಲೂಕು ಯೋಜನಾಧಿಕಾರಿ ಮೇದಪ್ಪ ನಾವೂರು ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಡಬ ವಲಯದ ಮೇಲ್ವಿಚಾರಕ ರವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ಬಿಳಿನೆಲೆ ವಲಯದ ಮೇಲ್ವಿಚಾರಕ ಆನಂದ ವಂದಿಸಿದರು.

LEAVE A REPLY

Please enter your comment!
Please enter your name here