ಏ.12: ಕೊಟ್ಟಿಬೆಟ್ಟು ಏಳ್ನಾಡುಗುತ್ತು ದೇವರ ಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ

0

ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಮೂರನೇ ದಿನವಾದ ಏ.12 ರಂದು ಶ್ರೀ ದೇವರ ಪೇಟೆ ಸವಾರಿಯಲ್ಲಿ ಕೊಟ್ಟಿಬೆಟ್ಟು ಏಳ್ನಾಡುಗುತ್ತು ಮನೆಯ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯಲ್ಲಿ ಶ್ರೀ ದೇವರು ಪೂಜೆ ಸ್ವೀಕರಿಸಲಿದ್ದಾರೆ. ಈ ಪ್ರಯುಕ್ತ ಕಟ್ಟೆಯಲ್ಲಿ ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಜರಗಲಿದೆ. ಶ್ರೀ ದೇವರು ಪೂಜೆ ಸ್ವೀಕರಿಸುವ ಕೊನೇಯ ಕಟ್ಟೆ ಇದಾಗಿದ್ದು ಕಟ್ಟೆಯಲ್ಲಿ ನಡೆಯುವ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ದೇವರ ಪೂಜಾ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಕೊಟ್ಟಿಬೆಟ್ಟು ಏಳ್ನಾಡುಗುತ್ತು ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ಕೆ.ರಾಧಾಕೃಷ್ಣ ನಾೖಕ್‌ ಮತ್ತು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here