ನಾಳೆ (ಎ.15 ಕ್ಕೆ) ಶ್ರೀ ಮಹಾಲಿಂಗೇಶ್ವರ ದೇವಳದ ಪುಷ್ಕರಣಿಯಲ್ಲಿ ಜಲವೃದ್ಧಿಗಾಗಿ ಗಂಗಾರತಿ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ನಡೆಯುತ್ತಿದ್ದು, ಎ.16 ರಂದು ನಡೆಯುವ ತೆಪ್ಪೋತ್ಸವ ನಡೆಯಲಿದೆ. ಇದಕ್ಕೆ ಪೂರಕವಾಗಿ ಎ.15 ರಂದು ಸಂಜೆ ಶ್ರೀ ದೇವರ ಬಲಿ ಉತ್ಸವದ ಬಳಿಕ ಕಟ್ಟೆ ಪೂಜೆಯ ಪ್ರಸಾದ ವಿತರಣೆಯ ಸಂದರ್ಭದಲ್ಲಿ ಪುಷ್ಕರಣಿಯಲ್ಲಿ ಜಲವೃದ್ದಿಗಾಗಿ ಗಂಗಾರತಿ ಕಾರ್ಯಕ್ರಮ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತಿಳಿಸಿದ್ದಾರೆ.


ರಥಾರತಿ ಮೂಲಕ ಸಾಮೂಹಿಕ ಗಂಗಾರತಿ ಕಾರ್ಯಕ್ರಮ ನಡೆಯಲಿದ್ದು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here