ನೇರಳಕಟ್ಟೆಯಲ್ಲಿ ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ವತಿಯಿಂದ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

0

ವಿಟ್ಲ : ಫೂಟ್ ಪಲ್ಸ್ ಥೆರಪಿ ಯಂತಹ ಶಿಬಿರದ ಪ್ರಯೋಜನ ವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನೇರಳಕಟ್ಟೆ ಶ್ರದ್ದಾ ಕೇಂದ್ರದ ಡಿ.ಕೆ. ಸ್ವಾಮಿ ಹೇಳಿದರು.

ನೇರಳಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಸಾಂಸ್ಕೃತಿಕ ಸಂಘ, ಗಣೇಶ್ ನಗರ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ, ನೇರಳಕಟ್ಟೆ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರ , ನೇತಾಜಿ ಗೆಳೆಯರ ಬಳಗ ನೇತಾಜಿ ನಗರ ಹಾಗೂ ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನೇರಳಕಟ್ಟೆ ಶ್ರೀ ಗಣೇಶ ಸಭಾ ಭವನದಲ್ಲಿ ನಡೆಯುತ್ತಿರುವ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಪ್ರವರ್ತಕ ಪ್ರಭಾಕರ ಸಾಲ್ಯಾನ್ ಮಾತನಾಡಿ ಫೂಟ್ ಪಲ್ಸ್ ಥೆರಪಿಯನ್ನು ಭಾರತದಲ್ಲಿ ಮೊದಲ ಬಾರಿ ಪರಿಚಯಿಸಲಾಗಿದ್ದು ವೈದ್ಯಕೀಯ ವಾಗಿ ಪ್ರಾಮಾಣಿಕವಾಗಿದೆ. ರಕ್ತ ಪರಿಚಲನೆ ಮತ್ತು ನರಗಳ ಯಾವುದೇ ರೀತಿಯ ಸರಳ ಮತ್ತು ದೀರ್ಘ ಕಾಲದ ಸಮಸ್ಯೆಗಳನ್ನು ಔಷಧಿ ರಹಿತವಾಗಿ ಅಡ್ಡ ಪರಿಣಾಮಗಳು ಇಲ್ಲದೇ ನಿವಾರಿಸಬಹುದು ಎಂದು ಅವರು ಮಧುಮೇಹ, ಅಧಿಕ ರಕ್ತದೊತ್ತಡ, ಸಂಧಿವಾತ, ವೆರಿಕೋಸ್ ವೇನ್, ಸ್ನಾಯು ಸೆಳೆತ, ಊತ, ಪಾರ್ಕಿನ್ ಸನ್, ಸಯಾಟಿಕಾ, ಸಯಾಟಿಕಾ, ಸರ್ವಿಕಲ್ ಸ್ಪಾಂಡಿಲೈಟಿಸ್, ನಿದ್ರಾಹೀನತೆ, ಥೈರಾಯ್ಡ್, ಪಾರ್ಶ್ವವಾಯು, ಬೆನ್ನುನೋವು, ಬೊಜ್ಜು ನಿವಾರಣೆ ಮೊದಲಾದ ಕಾಯಿಲೆಗಳಿಗೆ ಈ ಚಿಕಿತ್ಸೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದ್ದು ಎಪ್ರಿಲ್ 29 ರ ತನಕ ಪ್ರತಿದಿನ ಬೆಳಗ್ಗೆ 9.30 ರಿಂದ 4.30 ರ ವರೆಗೆ ಈ ಉಚಿತ ಶಿಬಿರ ನಡೆಯಲಿದೆ ಎಂದು ವಿವರಿಸಿದರು.

ನೇರಳಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬೇಬಿ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಸುರೇಶ್ ರೈ ಕುರ್ಲೆತ್ತಿಮಾರು, ನೇರಳಕಟ್ಟೆ, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಕಾರ್ಯದರ್ಶಿ ದಿನಕರ ನಾಯಕ್, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಲತೀಫ್ ನೇರಳಕಟ್ಟೆ, ಪಂಚಾಯತ್ ಸಿಬ್ಬಂದಿ ಉಪೇಂದ್ರ ಆಚಾರ್ಯ, ಸಿದ್ದಾರ್ಥ ಪ್ರಭು, ಮಧುಕರ ನಾಯಕ್ ಭಾಗವಹಿಸಿದ್ದರು.

ನೇರಳಕಟ್ಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷ ರಾಮಚಂದ್ರ ಮಾಸ್ಟರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಸಿಬ್ಬಂದಿ ಗಳಾದ ಪ್ರಶಾಂತ್ ನೀರ್ಕಜೆ ಹಾಗೂ ಸಂದ್ಯಶ್ರೀ ಸಹಕರಿಸಿದರು.

LEAVE A REPLY

Please enter your comment!
Please enter your name here