ರಾಮಕುಂಜ ಪದವಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

0

ವ್ಯಕ್ತಿತ್ವ ವಿಕಸನಕ್ಕೆ ವಿದ್ಯೆಯ ಜೊತೆಗೆ ಕ್ರೀಡೆಯೂ ತುಂಬಾ ಅವಶ್ಯಕ: ಜಯಕರ ರೈ

ರಾಮಕುಂಜ: ವ್ಯಕ್ತಿತ್ವ ವಿಕಸನಕ್ಕೆ ವಿದ್ಯೆ ಎಷ್ಟು ಮುಖ್ಯವೋ ಕ್ರೀಡೆಯೂ ಅಷ್ಟೇ ಅವಶ್ಯಕ ಎಂದು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜಯಕರ ರೈ ಬಡಲೂರು ಹೇಳಿದರು.


ಅವರು ಎ.13ರಂದು ನಡೆದ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ, ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಫುಲ್ಲ ರೈಯವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದಿನಕ್ಕೊಂದು ಘಂಟೆ ಕ್ರೀಡೆಗಾಗಿ ಮೀಸಲಿಡಿ ಎಂದು ಮಕ್ಕಳಿಗೆ ಕರೆಯಿತ್ತರು. ದಿನವಿಡೀ ನಡೆದ ಈ ಕ್ರೀಡಾಕೂಟದಲ್ಲಿ ಸುಮಾರು 23 ಕ್ರೀಡೆಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿದ್ದರು. ಪ್ರಾಂಶುಪಾಲ ಗಣರಾಜ ಕುಂಬ್ಳೆ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್‌ರವರ ಮುಂದಾಳತ್ವದಲ್ಲಿ ನಡೆದ ಈ ಕ್ರೀಡೋತ್ಸವಕ್ಕೆ ಬೋಧಕ ಹಾಗೂ ಬೋಧಕೇತರರು ಸಹಕಾರವಿತ್ತರು. ಶ್ರದ್ಧಾ ವಂದಿಸಿದರು. ಉಪನ್ಯಾಸಕ ಕೃಷ್ಣ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here