ಕಾಂಗ್ರೆಸ್ ಚುನಾವಣಾ ಕಚೇರಿಗೆ ಹೇಮನಾಥ ಶೆಟ್ಟಿ ಭೇಟಿ-ಒಗ್ಗಟ್ಟಿನ ಮಂತ್ರ ಪಠಿಸಿದ ನಾಯಕರು

0

ಪುತ್ತೂರು:ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸುವುದಾಗಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಹೇಳಿದ್ದಾರೆ. ಇಂದು ದರ್ಬೆಯಲ್ಲಿರುವ ಅಶೋಕ್ ಕುಮಾರ್ ಅವರ ಚುನಾವಣಾ ಕಚೇರಿಗೆ ಭೇಟಿ ನೀಡಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಅವರು ಅಶೋಕ್ ಕುಮಾರ್ ಅವರ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದ್ದಾರೆ.

ಪಕ್ಷದಿಂದ 14 ಮಂದಿ ಆಕಾಂಕ್ಷಿಗಳು ಟಿಕೆಟ್ ದಾಗಿ ಅರ್ಜಿ ಸಲ್ಲಿಸಿದ್ದೆವು. ಪಕ್ಷ ನಮಗೆ ತಾಯಿಯಂತೆ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ನಿಯಮ ನಿಬಂಧನೆಗಳಿಗೆ ಒಪ್ಪಿ ಅಶೋಕ್ ಕುಮಾರ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಬೇರೆ ಪಕ್ಷದಿಂದ ಬಂದವರಾದರೂ ನಮ್ಮ ಪಕ್ಷದ ಸಿದ್ಧಾಂತಕ್ಕೆ ಒಪ್ಪಿ ಬಂದವರು. ಹಾಗಾಗಿ ಯಾರು ಯಾವುದೇ ಗೊಂದಲ ಮನಸ್ತಾಪಗಳಿಲ್ಲದೆ ಅವರ ಗೆಲುವಿಗಾಗಿ ಶ್ರಮವಹಿಸಬೇಕೆಂದು ಹೇಮನಾಥ ಶೆಟ್ಟಿ ಕರೆ ನೀಡಿದ್ದಾರೆ.

ಇದೇ ವೇಳೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವಂತೆ ಅಶೋಕ್ ರೈ ಯವರಿಗೆ ಸಲಹೆ ನೀಡಿದರು. ಕ್ಷೇತ್ರದಲ್ಲಿ ಪಕ್ಷದ ಸಂಸದ, ಶಾಸಕರಿಲ್ಲದೆ ತುಂಬಾ ತೊಂದರೆ ಅನುಭವಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಅಶೋಕ್ ಕುಮಾರ್ ರೈ ಗೆಲುವು ಬಹಳ ಮುಖ್ಯವಾದದ್ದು. ಎಲ್ಲರೂ ಇದಕ್ಕಾಗಿ ಶ್ರಮಿಸುವಂತೆ ಅವರು ಹೇಳಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಅಶೋಕ್ ಕುಮಾರ್ ರೈ ಪಕ್ಷದ ನಾಯಕರ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯುವುದಾಗಿ ಹೇಳಿದ್ದಾರೆ.

ವಿಟ್ಲ- ಉಪ್ಪಿನಂಗಡಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮುಂಚೂಣಿ ನಾಯಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here