ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಿ.ಜೆ.ಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

0

ಆಲಂಕಾರು : ಪುತ್ತೂರು ಬಿ.ಜೆ.ಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಪ್ರಾಪ್ತಿಯಾಗುವಂತೆ ಪ್ರಾರ್ಥನೆ ಸಲ್ಲಿಸಿದರು.

ನಂತರ ಮಾತನಾಡಿ ಎ.20 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಆನಂತರ ಸಭೆ ನಡೆದು ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿ ಈ ಕಾರ್ಯಕ್ರಮದಲ್ಲಿ ಪಾರ್ಟಿಯ ಪ್ರಮುಖರು, ಕಾರ್ಯಕರ್ತಬಂಧುಗಳು ಹಾಗು ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು.

ಈ ಸಂಧರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ದಾಮೋದರ ಗೌಡ ಕಕ್ವೆ ಹಾಗು ಸದಸ್ಯರು ಆಲಂಕಾರು ಗ್ರಾ.ಪಂ ಅಧ್ಯಕ್ಷ ಸದಾನಂದ ಆಚಾರ್ಯ,ಪೆರಾಬೆ ಗ್ರಾ.ಪಂ ಅಧ್ಯಕ್ಷ ಮೋಹನದಾಸ ರೈ ಪರಾರಿಗುತ್ತು,ಸುಳ್ಯಮಂಡಲ ಬಿ.ಜೆ.ಪಿ ಪ್ರಬುದ್ದರ ಪ್ರಕೋಷ್ಠದ ಸಂಚಾಲಕರಾದ ಧರ್ಮಪಾಲ ರಾವ್ ಕಜೆ, ಎಸ್.ಟಿ ಮೋರ್ಚದ ಕಾರ್ಯದರ್ಶಿ ಪೂವಪ್ಪ ನಾಯ್ಕ್ .ಎಸ್ , ವೃತ್ತಿಪರ ಪ್ರಕೋಷ್ಠದ ಸಂಚಾಲಕ ಸದಾಶಿವ ಶೆಟ್ಟಿ ಮಾರಂಗ, ಕೊಯಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ರೈ ಮನವಳಿಕೆ,ಆಲಂಕಾರು ಸಿ.ಎ ಬ್ಯಾಂಕ್ ನಿರ್ದೇಶಕರಾದ ಶೇಷಪತಿ ರೈ ಗುತ್ತುಪಾಲು,ಸುಧಾಕರ ಪೂಜಾರಿ ಕಲ್ಲೇರಿ ಸೇರಿದಂತೆ ಹಲವು ಮಂದಿ ಬಿ.ಜೆ.ಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here