ಪಡುಮಲೆ ಧೃಡ ಕಲಶ ಕಾರ್ಯಕ್ರಮ

0

ಬಡಗನ್ನೂರುಃ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ದೇವರ ಪುನರ್ ಪ್ರತಿಷ್ಥಾ ಅಷ್ಟಬಂಧ ಬ್ರಹ್ಮಕಲಶೋತ್ವವ ಅಂಗವಾಗಿ ಏ 18 ಧೃಡ ಕಲಶೋತ್ಸವು ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ  ಪದ್ಮವಿಭೂಷಣ  ರಾಜರ್ಷಿ ಡಾ! ಡಿ. ವೀರೇಂದ್ರ ಹೆಗ್ಗಡೆಯವರ ಆಶಿರ್ವಾದದೊಂದಿಗೆ ಶ್ರೀ ಕ್ಷೇತ್ರ ತಂತ್ರಿಗಳಾದ ಬ್ರ!ವೇ! ಮೋ! ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರ! ವೇ!ಮೂ! ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.

 ಎ. 17 ರಂದು ರಾತ್ರಿ ಪುಣ್ಯಾಹವಾಚಕ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತುಪುಣ್ಯಾಂತ, ರಾತ್ರಿ ಪೂಜೆ, ಪ್ರಸಾದ ವಿತರಣೆ  ಬಳಿಕ ಅನ್ನಸಂತರ್ಪಣೆ ನಡೆಯಿತು.18 ರಂದು ಶ್ರೀ ದೇವರಿಗೆ ಧೃಡ ಕಲಶ  ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ, ನಡೆಯಿತು.

ರಾತ್ರಿ  ವಿಜಯ ಕುಮಾರ್ ಕೊಡಿಯಲ್ ಬೈಲ್  ನಿರ್ದೇಶನದ  ಶಿವದೂತೆ ಗುಳಿಗೆ  ನಾಟಕ  ನಡೆಯಿತು.ಈ ಸಂದರ್ಭದಲ್ಲಿ  ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ  ಬ್ರಹಮಕಲಶೋತ್ಸವ ಸಮಿತಿ  ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು ಉತ್ಸವ ಸಮಿತಿ  ಅಧ್ಯಕ್ಷ ರಾಮಣ್ಣ ಗೌಡ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here