ಮಾಡ್ನೂರು ವಲಯ ಕಾಂಗ್ರೆಸ್‌ ಸಭೆ

0

ಪುತ್ತೂರು : ಮಾಡ್ನೂರು ವಲಯ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಎ.20 ರಂದು ನಡೆಯಿತು. ಪುತ್ತೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ನೇತ್ರತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ವಕ್ತಾರ ಕಾವು ಹೇಮನಾಥ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಮ್.ಬಿ ವಿಶ್ವನಾಥ ರೈ ಬ್ಲಾಕ್‌ ಉಸ್ತುವಾರಿ ಮುರುಳಿಧರ ಮಠಂತಬೆಟ್ಟು, ಅನಿತ ಹೇಮನಾಥ್ ಶೆಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು, ಅಭಿಮಾನಿಗಳು,ಹಿತೈಷಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಮಾಡ್ನೂರು ವಲಯ ನನ್ನ ಸ್ವಂತ ಕ್ಷೇತ್ರವಾಗಿದ್ದು ಕಾಂಗ್ರೆಸ್‌ ಗೆಲುವಿಗೆ ಶ್ರಮಿಸುವುದಾಗಿ ಈ ಸಂದರ್ಭದಲ್ಲಿ ಕಾವು ಹೇಮನಾಥ ಶೆಟ್ಟಿ ಹೇಳಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ವಲಯ ಅಧ್ಯಕ್ಷ ಚಂದ್ರಶೇಖರ್‌ ಬಲ್ನಾಯ ಅವರ ಜನ್ಮದಿನವನ್ನು ಆಚರಿಸಲಾಯಿತು.

LEAVE A REPLY

Please enter your comment!
Please enter your name here