ದ್ವಿತೀಯ ಪಿಯು ವಾಣಿಜ್ಯ ವಿಭಾಗದಲ್ಲಿ 589 ಅಂಕ ಪಡೆದ ಹರ್ಷಿತಾಗೆ ಕೊಕ್ಕಡ ಜೆಸಿಐಯಿಂದ ಸನ್ಮಾನ

0

ನೆಲ್ಯಾಡಿ: ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 589 (ಶೇ.98.16) ಅಂಕ ಪಡೆದುಕೊಂಡ ಬೆಳ್ತಂಗಡಿ ವಾಣಿ ಪ.ಪೂ.ಕಾಲೇಜು ವಿದ್ಯಾರ್ಥಿನಿ, ಕಳೆಂಜ ಗ್ರಾಮದ ನೂಜಿಲ ಸತೀಶ್ ಗೌಡ ಹಾಗೂ ಗೀತಾ ದಂಪತಿಯ ಪುತ್ರಿ ಹರ್ಷಿತಾ ಅವರನ್ನು ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಎ.21ರಂದು ಕಳೆಂಜ ಗ್ರಾಮದ ನೂಜಿಲ ಮನೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಘಟಕಾಧ್ಯಕ್ಷ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು. ಕೌಕ್ರಾಡಿ ಸಂತ ಜಾನರ ಹಿ. ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತಾ ಡಿ ಸೋಜ ಅವರು ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಶಾಲು ಹೊದಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಅತ್ಯುತ್ತಮ ಶೈಕ್ಷಣಿಕ ಸಾಧನೆಯಿಂದ ಗ್ರಾಮಕ್ಕೆ ಕೀರ್ತಿ ತಂದ ಸಾಧನೆಗಾಗಿ ಶುಭಾಶಯಗಳನ್ನು ಸಲ್ಲಿಸಿದರು. ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಅವರು ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಅವರು ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಗೀತಾ, ಸತೀಶ್ ಗೌಡ, ಗ್ರಹಿತ್, ಮಾಯಿಲಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here