ಎ.26-28:ನೇರಳಕಟ್ಟೆ ಆರ್ಯಾಪು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ಅಮ್ಮನವರು, ಸ-ಪರಿವಾರ ದೈವಗಳ ವಾರ್ಷಿಕ ಮಾರಿಪೂಜೆ, ಬೆಳ್ಳಿ ಕತ್ತಿ, ತ್ರಿಶೂಲ ಸಮರ್ಪಣೆ

0

ಪುತ್ತೂರು: ನೇರಳಕಟ್ಟೆ ಆರ್ಯಾಪು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ಅಮ್ಮನವರು ಹಾಗೂ ಸ-ಪರಿವಾರ ದೈವಗಳಿಗೆ ಚಂಡಿಕಾ ಹೋಮ, ಬೆಳ್ಳಿಯ ಕತ್ತಿ ಹಾಗೂ ತ್ರಿಶೂಲ ಸಮರ್ಪಣೆ ಹಾಗೂ ವಾರ್ಷಿಕ ಮಾರಿಪೂಜೆಯು ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ವೇದಮೂರ್ತಿ ನಾಗೇಶ್ ತಂತ್ರಿ ಕೆಮ್ಮಿಂಜೆರವರ ನೇತೃತ್ವದಲ್ಲಿ ಎ.26 ರಿಂದ 28ರ ವರೆಗೆ ಜರಗಲಿದೆ.

ಬುಧವಾರದಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಪಂಚಗವ್ಯ-ಪುಣ್ಯವಾಚನ ಶುದ್ಧಿ, ಮಹಾಗಣಪತಿ ಹೋಮ, ಕಲಶ ಪೂಜೆ ಬಳಿಕ ಶ್ರೀ ಅಮ್ಮನವರಿಗೆ ಚಂಡಿಕಾ ಹೋಮ ಪ್ರಾರಂಭ(ಶ್ರೀಮತಿ ಮತ್ತು ಶ್ರೀ ಶಾಲಿನಿ ಸುರೇಶ್ ಪಿ.ದಂಪತಿಗಳ ಹರಕೆ ಸೇವೆ), ಶ್ರೀ ಅಮ್ಮನವರಿಗೆ ಕಲಶಾಭೀಷೇಕ, ಪರಿವಾರದೈವಗಳಿಗೆ ತಂಬಿಲ, ಶ್ರೀ ಅಮ್ಮನವರಿಗೆ, ಬೆಳ್ಳಿಯ ಕತ್ತಿ ಮತ್ತು ತ್ರಿಶೂಲ ಸಮರ್ಪಣೆ ನಡೆಯಲಿದೆ.

ಬೆಳಿಗ್ಗೆ ಶ್ರೀ ಅಮ್ಮನವರಿಗೆ ಚಂಡಿಕಾ ಹೋಮ ಪೂರ್ಣಾಹುತಿ ಶ್ರೀ ಅಮ್ಮನವರಿಗೆ ಗುಡಾನ್ನ ಮತ್ತು ಹಾಲು ಪಾಯಸ ಸಮರ್ಪಣೆ ನಂತರ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಹಾಗೂ ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ‘ಅಮ್ಮನ ಪ್ರಸಾದ’ ನಡೆಯಲಿದೆ. ಸಂಜೆ ಶ್ರೀ ಕಲ್ಲುರ್ಟಿ ದೈವದ ಅಭಯ ಸ್ವೀಕಾರ, ರಾತ್ರಿ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಶ್ರೀ ಅಮ್ಮನವರಿಗೆ ಮಹಾಪೂಜೆ, ಕ್ಷೇತ್ರದ ಇತರೇ ದೈವಗಳಿಗೆ ಪೂಜೆ, ಶ್ರೀ ಅಮ್ಮನವರಿಂದ ಹಾಗೂ ಸ-ಪರಿವಾರ ದೈವಗಳಿಂದ ಆಭಯ ಸ್ವೀಕಾರ, ಶ್ರೀ ಅಮ್ಮನವರ ಭಂಡಾರ ತೆಗೆಯುವುದು ಉತ್ಸವ ಬಯಲು ‘ಆರ್ಯಾಪು ನೇರಳಕಟ್ಟೆ’ ಮೂಲ ಕ್ಷೇತ್ರಕ್ಕೆ ಶ್ರೀ ಅಮ್ಮನವರ ಭಂಡಾರವನ್ನು ಕೊಂಡೊಯ್ಯುವುದು ನಡೆಯಲಿದೆ.

ಪ್ರಾತಃಕಾಲ ಆರ್ಯಾಪು ನೇರಳಕಟ್ಟೆಯಲ್ಲಿ ಶ್ರೀ ಅಮ್ಮನವರನ್ನು ಪ್ರತಿಸ್ಥಾಪಿಸುವುದು, ಶ್ರೀ ಅಮ್ಮನವರ ದೂತರಿಗೆ ಬಲಿ ನೀಡುವುದು, ಪೂರ್ವಾಹ್ನ ಕೈತೋಡು ಶ್ರೀ ಶಾರದಾಂಬ ಸೇವಾ ಸಮಿತಿ ಅದೂರು, ಕಾಸರಗೋಡು ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಶ್ರೀ ಅಮ್ಮನವರಿಗೆ ಮಹಾಪೂಜೆ, ಅನ್ನದ ಪಲ್ಲ ಪೂಜೆ, ಸ-ಪರಿವಾರ ದೈವಗಳಿಗೆ ಪೂಜೆ, ಮಡಸ್ಥಾನ ಸೇವೆ(ವಿಶೇಷ ಸೇವೆ), ಶ್ರೀ ಅಮ್ಮನವರ ಹಾಗೂ ಇತರೇ ದೈವಗಳಿಂದ ಅಭಯ ಸ್ವೀಕಾರ, ಆರ್ಯಾಪು ನೇರಳಕಟ್ಟೆಯಲ್ಲಿ ಶ್ರೀ ಅಮ್ಮನವರ ಮಹಾಪ್ರಸಾದ ವಿತರಣೆ, ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಅಮ್ಮನ ಪ್ರಸಾದ, ಸಂಜೆ ಶ್ರೀ ಅಮ್ಮನವರು ಹಾಗೂ ಸ-ಪರಿವಾರ ದೈವಗಳ ಭಂಡಾರವನ್ನು ಆರ್ಯಾಪು ನೇರಳಕಟ್ಟೆಯಿಂದ ದೇವಸ್ಥಾನಕ್ಕೆ ಕೊಂಡೊಯ್ಯುವುದು ಹಾಗೂ ಪ್ರತಿಷ್ಠಾಪಿಸುವುದು. ಶುಕ್ರವಾರದಂದು ಪೂರ್ವಾಹ್ನ ಶ್ರೀ ಅಮ್ಮನವರಿಗೆ ಶುದ್ಧಿ ಕಲಶ, ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.

ಸಭಾ ಕಾರ್ಯಕ್ರಮ: ಬುಧವಾರದಂದು ಸಂಜೆ ಸಭಾ ಕಾರ್ಯಕ್ರಮ ಜರಗಲಿದ್ದು, ಈ ಸಭಾ ಕಾರ್ಯಕ್ರಮದಲ್ಲಿ ಆರ್ಯಾಪು ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನದ ಆಡಳಿತ ಸಮಿತಿಯ ಗೌರವಾಧ್ಯಕ್ಷರಾದ ಸತೀಶ್ ರೈ ಮಿಷನ್‌ಮೂಲೆರವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಧಾಮ ಮಾಣಿಲ ಕ್ಷೇತ್ರದ ಮೋಹನದಾಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೃಷ್ಣಯ್ಯ ವಿಟ್ಲ ಅರಮನೆ, ಧಾರ್ಮಿಕ ಭಾಷಣವನ್ನು ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಮಾಡಲಿದ್ದಾರೆ. ಗೌರವ ಉಪಸ್ಥಿತಿಯಾಗಿ ನೇರಳಕಟ್ಟೆ ಆರ್ಯಾಪು ಶ್ರೀ ಅಮ್ಮನವರ ದೇವಸ್ಥಾನದ ಅಧ್ಯಕ್ಷ ರವಿಚಂದ್ರ ಆಚಾರ್ಯ, ಆರ್ಯಾಪು ಬಾರಿಕೆ ಶ್ರೀ ಪೂಮಾಣಿ ಕಿನ್ನಿಮಾಣಿ ದೈವಸ್ಥಾನದ ಅಧ್ಯಕ್ಷ ಮಂಜಪ್ಪ ರೈ ಬಾರಿಕೆ ಮನೆತನ, ಆರ್ಯಾಪು ಗುತ್ತಿನ ಮನೆಯ ಪಣಿರಾಜ್ ಜೈನ್, ನೇರಳಕಟ್ಟೆ ಆರ್ಯಾಪು ಶ್ರೀ ಅಮ್ಮನವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಗಂಗಾದರ ಸೀಗೆಬಲ್ಲೆರವರು ಭಾಗವಹಿಸಲಿದ್ದಾರೆ.

ಈ ಪುಣ್ಯ ಕಾರ್ಯದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ಎಲ್ಲಾ ಧಾರ್ಮಿಕ, ವೈದಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಗೌರವಾಧ್ಯಕ್ಷ ಸತೀಶ್ ರೈ ಮಿಶನ್‌ಮೂಲೆ, ಅಧ್ಯಕ್ಷ ರವಿಚಂದ್ರ ಆಚಾರ್ಯ, ಅನುವಂಶಿಕ ಆಡಳಿತ ಮೊಕ್ತೇಸರ ಗಂಗಾಧರ್ ಸೀಗೆಬಲ್ಲೆ ವಿಟ್ಲ, ಪ್ರಧಾನ ಕಾರ್ಯದರ್ಶಿ ದಿನೇಶ್ ರೈ ಮೊಡಪ್ಪಾಡಿಮೂಲೆ, ಪ್ರಧಾನ ಸಂಚಾಲಕರಾದ ನೇಮಾಕ್ಷ ಸುವರ್ಣ, ಕೋಶಾಽಕಾರಿ ಸುರೇಶ್ ಪಿ, ಶ್ರೀ ಅಮ್ಮನವರ ಸೇವಾ ಸಮಿತಿ ಅಧ್ಯಕ್ಷ ಜಗನ್ನಾಥ ಪಿ., ಆಡಳಿತ ಸಮಿತಿ ಕಾರ್ಯದರ್ಶಿ ಲೋಕೇಶ್ ರೈ ಮೇರ್ಲ, ಪ್ರಧಾನ ಅರ್ಚಕ ಸುನಿಲ್ ಮಚ್ಚೇಂದ್ರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮ, ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜರಗಲಿದೆ.

LEAVE A REPLY

Please enter your comment!
Please enter your name here