ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನಕ್ಕೆ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭೇಟಿ

0

ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ವೆಂಕಟ್ ವಲಳಂಬೆ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಭಾರಿ ಕುಶಾಲಪ್ಪ ಪೂವಾಜೆ, ಅಭ್ಯರ್ಥಿ ಪ್ರಮುಖ್ ವಿನಯ ಮುಳುಗಾಡು, ಮಂಡಲ ಕಾರ್ಯದರ್ಶಿ ಇಂದಿರಾ ಬಿ. ಕೆ, ಮಂಡಲ ಸವಣೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನೂಪ್ ಆಳ್ವ, ಜಿ. ಪಂ. ಮಾಜಿ ಸದಸ್ಯೆ ಪ್ರಮೀಳಾ ಜನಾರ್ದನ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಗ್ರಾ. ಪಂ. ಮಾಜಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾಣಿಯೂರು ಗ್ರಾ. ಪಂ ಸದಸ್ಯ ರಾಮಣ್ಣ ಗೌಡ ಮುಗರಂಜ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಮುರಳೀಧರ ಪುಣ್ಚತ್ತಾರು, ನಿರ್ದೇಶಕ ಪುಟ್ಟಣ್ಣ ಗೌಡ ಮುಗರಂಜ, ಮಾಜಿ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರಾಜೇಶ್ ಮೀಜೆ, ಮುರುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಕುಸುಮ ಶೆಟ್ಟಿ, ಸುಂದರ ಬೆದ್ರಾಜೆ, ಕೃಷ್ಣ ಚೆಟ್ಟಿಯಾರ್ ಮುಗರಂಜ, ಲಕ್ಷ್ಮಣ ಗೌಡ ಮುಗರಂಜ, ದಿಶಾಂತ್ ನಡುಬೈಲು, ಮಾಧವ ಗೌಡ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here