ಎ.30: ಮರ್ದಾಳ ಗ್ರಾ.ಪಂ.ಪಿಡಿಒ ಬಿ.ಶೇಖರ್ ನಿವೃತ್ತಿ

0

ಮರ್ದಾಳ: 2018 ರಿಂದ ಮರ್ದಾಳ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಬಿ.ಶೇಖರ್ ಅವರು ಎ.30ರಂದು ನಿವೃತ್ತಿಯಾಗಲಿದ್ದಾರೆ.

ಇವರು ಕಳೆದ 40 ವರ್ಷಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.


ಇವರು 1987ರಲ್ಲಿ ಬಂಟ್ವಾಳ ತಾಲೂಕಿನ ಪುದು ಮಂಡಲ ಪಂಚಾಯತ್‌ನಲ್ಲಿ ಕ್ಲರ್ಕ್ ಆಗಿ ಸೇವೆ ಆರಂಭಿಸಿದ್ದರು. 1992ರಲ್ಲಿ ಗ್ರೇಡ್ 2 ಕಾರ್ಯದರ್ಶಿಯಾಗಿ ನೇಮಕಗೊಂಡು ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮ ಪಂಚಾಯತ್‌ಗೆ ವರ್ಗಾವಣೆಗೊಂಡಿದ್ದರು. ಇಲ್ಲಿ ಸುಮಾರು 18 ವರ್ಷ ಸೇವೆ ಸಲ್ಲಿಸಿ 2010ರಲ್ಲಿ ಗ್ರೇಡ್ 1 ಕಾರ್ಯದರ್ಶಿಯಾಗಿ ಭಡ್ತಿ ಪಡೆದುಕೊಂಡು ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯತ್‌ಗೆ ವರ್ಗಾವಣೆಯಾಗಿದ್ದರು. 2014ರಲ್ಲಿ ಪಿಡಿಒ ಆಗಿ ಭಡ್ತಿ ಪಡೆದು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾ.ಪಂ.ಗೆ ವರ್ಗಾವಣೆಗೊಂಡಿದ್ದರು. ಅಲ್ಲಿಂದ 2018ರಲ್ಲಿ ಮರ್ದಾಳ ಗ್ರಾ.ಪಂ.ಗೆ ವರ್ಗಾವಣೆಗೊಂಡು ಆಗಮಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸುದೀರ್ಘ 40ವರ್ಷಗಳ ಕಾಲ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಎ.30ರಂದು ನಿವೃತ್ತಿಹೊಂದಲಿದ್ದಾರೆ.


ಇವರು ಬಂಟ್ವಾಳ ತಾಲೂಕಿನ ಪರಂಗಿಪೇಟೆ ದಿ.ಜಾರಪ್ಪ ಪೂಜಾರಿ ಹಾಗೂ ಭವಾನಿ ದಂಪತಿಯ ಪುತ್ರ. ಇವರ ಪತ್ನಿ ವಿಶಾಲಾಕ್ಷಿ ಗೃಹಿಣಿ. ಪುತ್ರ ರಕ್ಷಿತ್ ಕುಮಾರ್ ಕೆಪಿಟಿಸಿಎಲ್‌ನಲ್ಲಿ ಜೆಇ ಆಗಿದ್ದಾರೆ. ಇನ್ನೋರ್ವ ಪುತ್ರ ಹರ್ಷಿತ್‌ಕುಮಾರ್ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here