ಅಕ್ರಮ ನಡೆದಿಲ್ಲ- ಪರಿಶೀಲನಾ ವರದಿ

0

ಪುತ್ತೂರು: ಬಿಜೆಪಿ ಪಕ್ಷದ ಚಿಹ್ನೆಯನ್ನು ಉಪಯೋಗಿಸಿ ಚುನಾವಣಾ ಪ್ರಚಾರ ಮಾಡುತ್ತಿರುವುದಾಗಿ ಚುನಾವಣಾಧಿಕಾರಿಗೆ ಬಂದಿರುವ ದೂರಿಗೆ ಸಂಬಂಧಿಸಿ ಚುನಾವಣಾ ಮಾದರಿನೀತಿ ಸಂಹಿತೆ ತಂಡ ಎ.30ರಂದು ಬೆಳಿಗ್ಗೆ ಅರುಣ್ ಕುಮಾರ್ ಪುತ್ತಿಲ ಅವರ ಚುನಾವಣಾ ನಿರ್ವಹಣಾ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದಾಗ ಬಿಜೆಪಿ ಚಿಹ್ನೆ ಅಥವಾ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಯಾವುದೇ ಪತ್ರಕಗಳು ಪತ್ತೆಯಾಗಿಲ್ಲ. ಅರುಣ್ ಕುಮಾರ್ ಪುತ್ತಿಲ ಅವರ ಪ್ರಚಾರ ತಂಡವನ್ನು ವಿಚಾರಿಸಿದಾಗಲೂ ಯಾವುದೇ ಅಕ್ರಮ ನಡೆದಿಲ್ಲ ಎಂಬ ಕುರಿತು ಮಾದರಿ ನೀತಿ ಸಂಹಿತೆ ನೋಡೆಲ್ ಅಧಿಕಾರಿ ಚುನಾವಣಾಧಿಕಾರಿಯವರಿಗೆ ವರದಿ ನೀಡಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here