ಮಾದಕ ವಸ್ತು ಸಾಗಾಟ: ವೇಣೂರು ಪೊಲೀಸರಿಂದ ಸವಣೂರು ನಿವಾಸಿ ಬಂಧನ

0

ಪುತ್ತೂರು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಕಡಬ ತಾಲೂಕಿನ ಸವಣೂರು ಗ್ರಾಮದ ಇಡ್ಯಾಡಿ ನಿವಾಸಿ ಪ್ರಸಾದ್ ಯಾನೆ ಪಚ್ಚು (31ವ.) ಎಂಬವರನ್ನು ವೇಣೂರು ಪೊಲೀಸರು ಬಂಧಿಸಿ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

ಪ್ರಸಾದ್ ಎ.30ರಂದು ಮಧ್ಯಾಹ್ನ ಮೋಟಾರ್ ಸೈಕಲ್‌ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿರುವುದನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಹಂದೇವು ಮೂರು ಮಾರ್ಗ ಎಂಬಲ್ಲಿ ವೇಣೂರು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ವಶದಲ್ಲಿದ್ದ ಸುಮಾರು 17 ಸಾವಿರ ರೂ., ಮೌಲ್ಯದ 545 ಗ್ರಾಂ. ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಸುಮಾರು 20 ಸಾವಿರ ರೂ., ಬೆಲೆಯ ಮೋಟಾರ್ ಸೈಕಲ್ ವಶಕ್ಕೆ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here