ಸುಳ್ಯಪದವಿನಲ್ಲಿ ಆಪ್ ಭರ್ಜರಿ ಪ್ರಚಾರ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನಸಭೆಗೆ ಮೇ.10ರಂದು ನಡೆಯಲಿರುವ ಚುನಾವಣೆಗೆ ಪುತ್ತೂರಿನಲ್ಲಿ ಬಿರುಸಿನ ಪ್ರಚಾರ ಆರಂಭಗೊಂಡಿದೆ. ಪುತ್ತೂರು ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿಜ್ಞಾನಿ ಡಾ.ವಿಶುಕುಮಾರ್ ಗೌಡ ಸುಳ್ಯಪದವಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ದೆಹಲಿ ಮತ್ತು ಪಂಜಾಬ್ ನಲ್ಲಿ ಪಕ್ಷದ ಆಡಳಿತವಿದ್ದು, ರಾಜ್ಯದಲ್ಲಿಯೂ ಆಡಳಿತಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here