![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು:ಬಿಜೆಪಿ ಅಭ್ಯರ್ಥಿ ಅಶಾ ತಿಮ್ಮಪ್ಪ ಮತಯಾಚನೆಯ ಬೃಹತ್ ರ್ಯಾಲಿ ಕಾರ್ಯಕ್ರಮ ಮೇ 8ಕ್ಕೆ ಉಪ್ಪಿನಂಗಡಿಯಲ್ಲಿ ನಡೆಯಲಿದೆ.
ಬೃಹತ್ ರ್ಯಾಲಿಯು ಬೆಳಿಗ್ಗೆ ಗಂಟೆ 9ಕ್ಕೆ ಉಪ್ಪಿನಂಗಡಿ ಗಾಂಧಿಪಾರ್ಕ್ ನಿಂದ ಹೊರಟು ರಾಜಬೀದಿಗಳಲ್ಲಿ ಸಾಗಿ ಹೊಸ ಬಸ್ ನಿಲ್ದಾಣದ ತನಕ ಸಾಗಲಿದ್ದು, ಅಲ್ಲಿ ಮತಯಾಚನೆ ಕಾರ್ಯಕ್ರಮ ನಡೆಯಲಿದೆ. ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿಳಿಸಿದ್ದಾರೆ.
![](https://puttur.suddinews.com/wp-content/uploads/2023/05/890a44d0-2c1a-4239-9ff9-ee00568da499.jpg)