![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಚುನಾವಣಾಧಿಕಾರಿ ಗಿರೀಶ್ನಂದನ್ ಅವರು ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಕುರಿತು ಪರಿಶೀಲನೆ ನಡೆಸಿದರು.
ಪುತ್ತೂರು ನೆಲ್ಲಿಕಟ್ಟೆಯಲ್ಲಿರುವ ಸಖೀ ಮತದಾನ ಕೇಂದ್ರಕ್ಕೆ ತೆರಳಿದ ಅವರು ಅಲ್ಲಿನ ಮತದಾರರಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ತಿಳಿಸುವಂತೆ ಮತ್ತು ಸಾವಕಾಶವಾಗಿ ಶಾಂತಿಯಿಂದ ಮತಚಲಾಯಿಸುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ಮಧು ಎಸ್ ಮನೋಹರ್ ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/05/8c2aff94-1e2b-49ca-8b41-c9336736b1a8.jpg)