ಮಹಿಳೆಯ ಮಾನಭಂಗ ಯತ್ನ – ಆರೋಪಿ ದೋಷ ಮುಕ್ತ

0

ಪುತ್ತೂರು: 9 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದಿದ್ದ ಮಹಿಳೆಯೋರ್ವರ ಮಾನಭಂಗ ಯತ್ನ ಪ್ರಕರಣದ ಆರೋಪಿಯನ್ನು ನ್ಯಾಯಾಲಯ ದೋಷಮುಕ್ತಗೊಳಿಸಿ ಬಿಡುಗಡೆಗೊಳಿಸಿದೆ.

2014ರ ಅಕ್ಟೋಬರ್ 24ರಂದು ಉಪ್ಪಿನಂಗಡಿ ಪೇಟೆಯಲ್ಲಿ ಆಟೋರಿಕ್ಷಾ ಚಾಲಕ ವಿಶ್ವನಾಥ್ ಪೂಜಾರಿ ಎಂಬವರು ಮಹಿಳೆಯೋರ್ವರ ಮಾನಭಂಗ ಮಾಡಿ, ಎಡ ಕೈ ಕಿರುಬೆರಳಿಗೆ ಸಾಮಾನ್ಯ ಸ್ವರೂಪದ ನೋವುಂಟು ಮಾಡಿದ್ದಾರೆಂದು ಆರೋಪಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶಿವಣ್ಣ ಹೆಚ್.ಆರ್.ರವರು ಆರೋಪಿ ವಿಶ್ವನಾಥ್ ಪೂಜಾರಿಯವರನ್ನು ಪ್ರಕರಣದಿಂದ ದೋಷ ಮುಕ್ತಗೊಳಿಸಿರುತ್ತಾರೆ. ಆರೋಪಿ ಪರ ವಕೀಲ ಮಹೇಶ್ ಕಜೆಯವರು ವಾದಿಸಿದ್ದರು.

LEAVE A REPLY

Please enter your comment!
Please enter your name here