ಆಯುಧ ಹಿಂಪಡೆಯಲು ಆದೇಶ

0

ಮಂಗಳೂರು:2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಠೇವಣಿ ಇರಿಸಲಾಗಿರುವ ಆಯುಧಗಳನ್ನು ಹಿಂಪಡೆದುಕೊಳ್ಳುವಂತೆ ದ.ಕ.ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ರವಿ ಕುಮಾರ್ ಎಂ.ಆರ್.ಆದೇಶ ಹೊರಡಿಸಿದ್ದಾರೆ.

ಮೇ15ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಮೇ16ರಿಂದ, ಮಂಗಳೂರು ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಠೇವಣಿ ಇರಿಸಲಾಗಿರುವ ಜಿಲ್ಲೆಯ ಎಲ್ಲಾ ಆಯುಧ ಪರವಾನಿಗೆದಾರರ ಆಯುಧಗಳನ್ನು ಹಿಂಪಡೆಯುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here