![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಬಿಳಿನೆಲೆ ಬೈಲು ಸ ಹಿ ಪ್ರಾ. ಶಾಲೆ ಶಾಲಾ ಪ್ರಾರಂಭೋತ್ಸವವು ಮೇ.31ರಂದು ಮಕ್ಕಳಿಗೆ ಆರತಿ ಬೆಳಗಿಸಿ ಮೆರವಣಿಗೆಯ ಮೂಲಕ ಶಾಲೆಗೆ ಬರಮಾಡಿಕೊಳ್ಳಲಾಯಿತು.
![](https://puttur.suddinews.com/wp-content/uploads/2023/06/b1e220fc-8d44-46a1-afd1-6ffb190f2b8f.jpg)
ನಂತರ ಶಾಲಾ ಎಸ್ಡಿಎಂಸಿ ಅಧ್ಯಕ್ಷ ವಿನೇಶ್ಕುಮಾರ್ರವರ ಅಧ್ಯಕ್ಷತೆಯಲ್ಲಿ ಎಸ್ಡಿಎಂಸಿ ಮತ್ತು ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು. ವೇದಿಕೆಯಲ್ಲಿ ನಿವೃತ್ತ ಮುಖ್ಯ ಗುರುಗಳಾದ ಸುಮತಿ ಪಿ. ಹಾಗೂ ಎಸ್ಡಿಎಂಸಿ ಉಪಾಧ್ಯಕ್ಷೆ ಜಯಲಕ್ಷ್ಮಿ ಉಪಸ್ಥಿತರಿದ್ದು ಶುಭಹಾರೈಸಿದರು. ಪೋಷಕರು, ಎಸ್ಡಿಎಂಸಿ ಸದಸ್ಯರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಭಾರ ಮುಖ್ಯಗುರು ಸುನಂದ ಬಿ. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಎ ವಂದಿಸಿದರು. ಸಹಶಿಕ್ಷಕಿ ದಮಯಂತಿ ಜಿ. ಕಾರ್ಯಕ್ರಮ ನಿರ್ವಹಿಸಿದ್ದರು. ಗೌರವ ಶಿಕ್ಷಕಿ ರಜನಿ ಮತ್ತು ಪಾರ್ವತಿ ಸಹಕರಿಸಿದ್ದರು.