ಆಲಂಕಾರು: ದುರ್ಗಂಬಾ ಪ್ರೌಢ ಶಾಲೆಯಲ್ಲಿ ಸುದೀರ್ಘ 39 ವರ್ಷಗಳ ಕಾಲ ಜವಾನರಾಗಿ ಕರ್ತವ್ಯ ನಿರ್ವಹಿಸಿ ಸೇವಾ ವಯೋನಿವೃತ್ತಿ ಹೊಂದಿದ ನಾರಾಯಣ ಬಿ ಯವರ ಬೀಳ್ಕೊಡುಗೆ ಕಾರ್ಯಕ್ರಮ ದುರ್ಗಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ದಯಾನಂದ ರೈ ಮಾನವಳಿಕೆಗುತ್ತು ನಾರಾಯಣ ಬಿ ಅವರ ಪ್ರಾಮಾಣಿಕ ಸೇವೆಯ ಬಗ್ಗೆ ತಿಳಿಸಿ ನಿವೃತ್ತಿ ಜೀವನವು ಸುಖ, ಶಾಂತಿ,ನೆಮ್ಮದಿಯಿಂದ ಕೂಡಿರಲಿ ಎಂದು ತಿಳಿಸಿ ಶುಭ ಹಾರೈಸಿದರು. ಆಡಳಿತ ಮಂಡಳಿಯ ಸದಸ್ಯರಾದ ಮುತ್ತಪ್ಪ ಪೂಜಾರಿ ನೆಯ್ಯಲ್ಗ ಮತ್ತು ದಯಾನಂದ ಗೌಡ ಆಲಡ್ಕರವರು ನಾರಾಯಣ .ಬಿ ಅವರ ಗುಣಗಾನ ಮಾಡಿ ಸೇವಾ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ಮುಖ್ಯ ಗುರುಗಳಾದ ಶ್ರೀಪತಿ ರಾವ್ ರವರು ಪ್ರಸ್ತಾವಿಕವಾಗಿ ಮಾತನಾಡಿ ಅವರ ಸೇವಾ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ತಿಳಿಸಿ ಸ್ವಾಗತಿಸಿದರು. ಉಪನ್ಯಾಸಕಿಯಾದ ಶ್ರೀಮತಿ ರೂಪಾ ಎಂ ಟಿ ಯವರು ಕಾರ್ಯಕ್ರಮ ನಿರೂಪಿಸಿ ಪ್ರಾಂಶುಪಾಲರಾದ ನವೀನ್ ರೈ ವಂದಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಭೋದಕ, ಭೋದಕೇತರ ವರ್ಗದವರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.