ಸಜಂಕಾಡಿ ದ.ಕ ಜಿ.ಪಂ.ಹಿ ಪ್ರಾ ಶಾಲಾ ಪ್ರಾರಂಭೋತ್ಸವ ಮತ್ತು ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ

0

ಪುತ್ತೂರು : ಸಜಂಕಾಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಹಾಗೂ ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ ಮೇ 31 ರಂದು ನಡೆಯಿತು.


ಸಮಾರಂಭದಲ್ಲಿ ಮಕ್ಕಳಿಗೆ ಸರಕಾರದಿಂದ ನೀಡಿದ ಸಮವಸ್ತ್ರ ಮತ್ತು ಪಠ್ಯ ಪುಸ್ತಕವನ್ನು ವಿತರಿಸಲಾಯಿತು ಮತ್ತು ಪೋಷಕರ ನೆರವಿನೊಂದಿಗೆ ನಿವೃತ್ತಿಗೊಂಡ ಸಹಶಿಕ್ಷಕಿ ಸಾವಿತ್ರಿಯವರನ್ನು ಶಾಲು ಹೊದಿಸಿ ಸ್ಮರಣಕ್ಕೆ ನೀಡಿ ಗೌರವಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್, ತಾಲೂಕು ದೈಹಿಕ ಪರಿವೀಕ್ಷಕ ಸುಂದರ ಗೌಡ, ಶಿಕ್ಷಣ ಸಂಯೋಜಕಿ ಅಮೃತ ಕಲಾ, ಅಕ್ಷರ ದಾಸೋಹ ನಿರ್ದೇಶಕ ವಿಷ್ಣು ಪ್ರಸಾದ್, ಕುಂಬ್ರ ಕ್ಲಸ್ಟರ್ ನ ಸಿ ಆರ್ ಪಿ ಶಶಿಕಲಾ ಇಲಾಖೆ ವತಿಯಿಂದ ಶಿಕ್ಷಕಿಗೆ ಸನ್ಮಾನಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್, ಉಪಾಧ್ಯಕ್ಷ ಸುಧಾಕರ್ ರೈ ಶಿಕ್ಷಕಿಯನ್ನು ಸಂಘದ ವತಿಯಿಂದ ಸನ್ಮಾನಿಸಿದರು. ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವು ಪ್ರಭಾರ ಮುಖ್ಯ ಶಿಕ್ಷಕಿಯವರ ಸ್ವಾಗತ,ಪ್ರಸ್ತಾವನೆ ಹಾಗೂ ಧನ್ಯವಾದದೊಂದಿಗೆ ಮುಕ್ತಾಯಗೊಂಡಿತು.

ವೇದಿಕೆಯಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷ ಅಬೂಬಕರ್, ಗ್ರಾಮ ಪಂಚಾಯತ್ ಸದಸ್ಯ ಕುಮಾರ್, ತಾಯಂದಿರ ಸಮಿತಿ ಕಾರ್ಯದರ್ಶಿ ಗೀತಾ ಉಪಸ್ಥಿತರಿದ್ದರು. ಮಕ್ಕಳಿಗೆ ಪೋಷಕರಿಗೆ ಅತಿಥಿಗಳಿಗೆ ನಿವೃತ್ತಿ ಹೊಂದಿದ ಶಿಕ್ಷಕಿಯ ವತಿಯಿಂದ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here