ಅಪಘಾತಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಸದ್ದಿಲ್ಲದೆ ಆರ್ಥಿಕ ನೆರವು ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್

0

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ಎಂಕಾಮ್ ವಿದ್ಯಾರ್ಥಿನಿ ಶ್ರೀದೇವಿ ಪುತ್ತೂರಿನಲ್ಲಿ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಗೆ ರೂ. 10 ಲಕ್ಷಕ್ಕೂ ಅಧಿಕ ಖರ್ಚಾಗುವ ಸಾಧ್ಯತೆ ಕುರಿತಂತೆ ಮಾಹಿತಿ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಸದ್ದಿಲ್ಲದೆ ದೆಹಲಿಯಿಂದಲೇ ಆರ್ಥಿಕ ನೆರವು ತಲುಪಿಸಿದ್ದಾರೆ.


ಅಪಘಾತಕ್ಕೊಳಗಾದ ವಿದ್ಯಾರ್ಥಿನಿಗೆ ಚಿಕಿತ್ಸೆಗೆ ಆರ್ಥಿಕ ನೆರವು ಕುರಿತು ಅವರ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಮಾಹಿತಿ ಪಡೆದ ಸಂಸದರು ವೈಯಕ್ತಿಕ ರೂ 1.50 ಲಕ್ಷ ಹಣವನ್ನು ಆಸ್ಪತ್ರೆಗೆ ತಲುಪಿಸಿದ್ದು ಮಾತ್ರವಲ್ಲದೆ ಆಸ್ಪತ್ರೆಯ ಮುಖ್ಯ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.ಹೆಚ್ಚಿನ ಸಹಾಯದ ಅವಶ್ಯಕತೆಯಿದ್ದಲ್ಲಿ ಸಂಪೂರ್ಣವಾಗಿ ಸಹಕರಿಸುವುದಾಗಿ ವೈದ್ಯರು ಮತ್ತು ಕುಟುಂಬಸ್ಥರಿಗೆ ತಿಳಿಸಿದ್ದಾರೆ ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here