ಅಸಮರ್ಪಕ ಹೆದ್ದಾರಿ ಕಾಮಗಾರಿ :ಹೋರಾಟದ ಕುರಿತು ಇಂದು ನೆಲ್ಯಾಡಿಯಲ್ಲಿ ಸಭೆ

0

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆ ತನಕ ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆ ಸೇರಿದಂತೆ ಈ ಪ್ರದೇಶದಲ್ಲಿ ಕಾಮಗಾರಿ ಅಸಮರ್ಪಕವಾಗಿ ನಡೆಯುತ್ತಿದ್ದು ಇದರ ವಿರುದ್ಧ ಪ್ರತಿಭಟನೆ ನಡೆಸುವ ಕುರಿತು ಚರ್ಚಿಸಲು ಜೂ.10ರಂದು ಸಂಜೆ 4ಕ್ಕೆ ನೆಲ್ಯಾಡಿ ಡಿಯೋನ್ ಸ್ಕ್ವೇರ್‌ನಲ್ಲಿ ಸಭೆ ಕರೆಯಲಾಗಿದೆ.


ಅಸಮರ್ಪಕ ಹೆದ್ದಾರಿ ಕಾಮಗಾರಿ ವಿರುದ್ಧ ಈ ಹಿಂದೆ ಜೂ.9ರಂದು ನೆಲ್ಯಾಡಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಇದನ್ನು ಮುಂದೂಡಲಾಗಿದ್ದು ಇದೀಗ ಈ ಭಾಗದ ಎಲ್ಲಾ ಸಂಘ ಸಂಸ್ಥೆಯವರನ್ನು ಸೇರಿಸಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೆಲ್ಯಾಡಿ, ಕೌಕ್ರಾಡಿ ಹಾಗೂ ಗೋಳಿತ್ತೊಟ್ಟು ಗ್ರಾ.ಪಂ.ವ್ಯಾಪ್ತಿಯ ಸಂಘ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಜೂ.10ರಂದು ಸಂಜೆ ನಡೆಯುವ ಸಭೆಯಲ್ಲಿ ಭಾಗವಹಿಸಿ ಹೋರಾಟದ ಕುರಿತು ಅಭಿಪ್ರಾಯ, ಸಲಹೆ ಸೂಚನೆ ನೀಡುವಂತೆ ನೆಲ್ಯಾಡಿ ಕೌಕ್ರಾಡಿ ಕಟ್ಟಡ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಹೊಸವಕ್ಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here