ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

0

ಪುತ್ತೂರು: 2023-24 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯ ಸಲುವಾಗಿ ಜೂ.12ರಂದು ಚುನಾವಣೆ ನಡೆಯಿತು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಿಜ್ಞಾನ ವಿಭಾಗದ ಹರ್ಷೇಂದ್ರ ಪ್ರಸಾದ್, ಕಾರ‍್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ನೇತ್ರಾ ಭಟ್, ಜೊತೆ ಕಾರ‍್ಯದರ್ಶಿಯಾಗಿ ಪ್ರಥಮ ವಿಜ್ಞಾನ ವಿಭಾಗದ ಅಗಮ್ಯ ಚುನಾಯಿತರಾದರು. ಕ್ರೀಡಾ ವಿದ್ಯಾರ್ಥಿ ಸಂಯೋಜಕರಾಗಿ ದ್ವಿತೀಯ ವಿಜ್ಞಾನ ವಿಭಾಗದ ಸೃಜನ್ ಆಯ್ಕೆಯಾದರು.


ಈ ಪ್ರಕ್ರಿಯೆಯನ್ನು ನರೇಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಕಾರ್ತಿಕ್ ಕುಮಾರ್‌ಎನ್. ಇವರು ನಡೆಸಿಕೊಟ್ಟರು.ಉಪನ್ಯಾಸಕರು ಮತ್ತುಸಿಬ್ಬಂದಿ ವರ್ಗದವರು ಸಹಕರಿಸಿದರು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಶುಭಹಾರೈಸಿ,ಸರಿಯಾದ ಮಾರ್ಗದರ್ಶನ ಪಡೆದುಕೊಳ್ಳುತ್ತಾ,ಸಂಸ್ಥೆಯ ಏಳಿಗೆಗೆ ಪೂರಕವಾಗಿ ನಡೆದುಕೊಂಡುಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಮುಂದುವರಿಯಬೇಕು ಎಂದು ನುಡಿದರು

LEAVE A REPLY

Please enter your comment!
Please enter your name here