ನೆಲ್ಯಾಡಿ: ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ ಉಪನ್ಯಾಸಕ ವಿಶ್ವನಾಥ ಶೆಟ್ಟಿಯವರಿಗೆ ಸನ್ಮಾನ

0

ನೆಲ್ಯಾಡಿ: ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪುರಸ್ಕೃತ ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ ಹಾಗೂ ಶ್ರೀಮತಿ ಸೌಮ್ಯ ದಂಪತಿಯನ್ನು ನೆಲ್ಯಾಡಿಯ ಲಹರಿ ಸಂಗೀತ ಕಲಾಕೇಂದ್ರದ ವತಿಯಿಂದ ಜೂ.11ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.


ಕಳೆದ ಒಂದೂವರೇ ವರ್ಷದಿಂದ ನೆಲ್ಯಾಡಿಯಲ್ಲಿ ಲಹರಿ ಸಂಗೀತ ಕಲಾ ಕೇಂದ್ರದ ಮೂಲಕ ವಿದ್ಯಾರ್ಥಿಗಳಿಗೆ ಕೀಬೋರ್ಡ್ ಹಾಗೂ ಸುಗಮ ಸಂಗೀತ ತರಬೇತಿಯನ್ನು ನೀಡುತ್ತಿರುವ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ.,ರವರ ಬಹುಮುಖ ಪ್ರತಿಭೆಯ ಸಾಧನೆಗಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸನ್ಮಾನ ಸಮಾರಂಭದಲ್ಲಿ ಲಹರಿ ಸಂಗೀತ ಕಲಾಕೇಂದ್ರದ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here