![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಪುತ್ತೂರು ಇದರ ಮಾರ್ಗದರ್ಶನದಲ್ಲಿ ಬೆಟ್ಟಂಪಾಡಿ ವಲಯದ ಪಾಣಾಜೆ ಎ ಕಾರ್ಯಕ್ಷೇತ್ರದಲ್ಲಿ ಕಲ್ಲಪದವು ಮಾದೇರಿ ಎಂಬಲ್ಲಿ ಶ್ರೀ ಲಕ್ಷ್ಮಿ ಸ್ವಸಹಾಯ ಸಂಘವನ್ನು ಪಾಣಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬೂಬಕ್ಕರ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪಾಣಾಜೆ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ ಪೂಜಾರಿ ಉಪಸ್ಥಿತರಿದ್ದರು. ಬೆಟ್ಟಂಪಾಡಿ ವಲಯ ಮೇಲ್ವಿಚಾರಕ ಚಂದ್ರಶೇಖರ್ ಸಂಘದ ನಿಯಮಾವಳಿ ಬಗ್ಗೆ ಮಾಹಿತಿ ನೀಡಿದರು. ಪಾಣಾಜೆ ಎ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಮಮತ ಸ್ವಾಗತಿಸಿ ವಂದಿಸಿದರು.ನೂತನ ಸ್ವಸಹಾಯ ಸಂಘದಲ್ಲಿ ಒಟ್ಟು ಹತ್ತು ಮಂದಿ ಸದಸ್ಯರೂ ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/06/IMG-20230615-WA0015.jpg)