![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ಕರ್ನಾಟಕ ಹಾಗೂ ಕೇರಳ ರಾಜ್ಯಗಳನ್ನು ಅತೀ ಸಮೀಪದಲ್ಲಿ ಸಂಪರ್ಕಿಸುವ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಾಣ ಮಾಡಲು ಕರ್ನಾಟಕ ರಾಜ್ಯ ಸರಕಾರದಿಂದ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ಸರಕಾರದ ಗಮನ ಸೆಳೆಯಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಕಾಞಂಗಾಡು-ಕಾಣಿಯೂರು ಹಳಿ ನಿರ್ಮಾಣ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.
![](https://puttur.suddinews.com/wp-content/uploads/2023/06/fa54d3b9-0b84-4c86-ad04-28c849ebc0a2.jpg)
ಜೂ.17ರಂದು ಶಾಸಕರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಕ್ರಿಯಾ ಸಮಿತಿ ಪದಾಧಿಕಾರಿಗಳು ಶಾಸಕರ ಜೊತೆ ಮಾತುಕತೆ ನಡೆಸಿದರು. ಕೇರಳ ಮತ್ತು ಕರ್ನಾಟಕ ರಾಜ್ಯಗಳನ್ನು ಅತೀ ಸಮೀಪದಲ್ಲಿ ಸಂಪರ್ಕಿಸುವ ಮತ್ತು ಅತೀ ಕಡಿಮೆ ಖರ್ಚಿನಲ್ಲಿ ನಿರ್ಮಾಣ ಮಾಡಬಹುದಾದ ರೈಲ್ವೇ ಹಳಿ ಇದಾಗಿದ್ದು ಈ ಯೋಜನೆಗೆ ರೈಲ್ವೇ ಹಾಗೂ ಕೇರಳ ಸರಕಾರ ಒಪ್ಪಿಗೆ ನೀಡಿದೆ. ಕರ್ನಾಟಕ ಸರಕಾರ ಇದಕ್ಕೆ ಒಪ್ಪಿಗೆ ನೀಡಿಲ್ಲ. ಈ ಹಿನ್ನಲೆಯಲ್ಲಿ ಸರಕಾರದ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕಾಞಂಗಾಡ್-ಕಾಣಿಯೂರು ಕ್ರಿಯಾ ಸಮಿತಿಯ ಪದಾಧಿಕಾರಿಗಳಾದ ಎನ್.ಎ.ರಾಮಚಂದ್ರ, ಪಿ.ಬಿ.ಸುಧಾಕರ ರೈ, ಸೂರ್ಯನಾರಾಯಣ ಭಟ್, ಎಂ.ವಿ.ಭಾಸ್ಕರನ್, ಜೋಸ್ ಕೊಚ್ಚಿಕುನ್ನೇಲ್, ಮಹೇಶ್ ಕುಮಾರ್ ಮೇನಾಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.