ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ನ್ಯಾ. ರಾಜೇಶ್ ರೈ ಕಲ್ಲಂಗಳ ರಿಗೆ ಅಭಿನಂದನಾ ಕಾರ್ಯಕ್ರಮ

0

ಸಂಶೋಧನಾ ಜರ್ನಲ್ ‘ಲೀಗಲ್ ಸ್ಪೆಕ್ಟ್ರಂ -4’ರ ಬಿಡುಗಡೆ

ಪುತ್ತೂರು: ನೆಹರೂನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಯಾದ ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಹಾವಿದ್ಯಾಲಯದ ಸಂಶೋಧನಾ ಜರ್ನಲ್ ಲೀಗಲ್ ಸ್ಪೆಕ್ಟ್ರಂ -4 ರ ಬಿಡುಗಡೆ ಸಮಾರಂಭ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ನ್ಯಾ. ರಾಜೇಶ್ ರೈ ಕಲ್ಲಂಗಳ ರವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಶೋಧನಾ ಜರ್ನಲ್ ಲೀಗಲ್ ಸ್ಪೆಕ್ಟ್ರಂ -4 ರ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಕಾನೂನು ಮಹಾವಿದ್ಯಾಲಯದ ಸಂಶೋಧನಾ ಜರ್ನಲ್ ಲೀಗಲ್ ಸ್ಪೆಕ್ಟ್ರಂ ಹೆಸರೇ ಹೇಳುವಂತೆ ಕಾಮನಬಿಲ್ಲಿನಂತೆ ವಿಶಿಷ್ಟವಾಗಿದೆ. ಜೊತೆಗೆ ಈ ಜರ್ನಲ್ ಕಾನೂನು ಕ್ಷೇತ್ರದ ವಿವಿಧ ಆಯಾಮಗಳ ಕುರಿತು ಉತ್ತಮ ಗುಣಮಟ್ಟದ ಸಂಶೋಧನಾ ಪ್ರಬಂಧಗಳಿಂದ ಕೂಡಿದೆ. ಜಗತ್ತಿನಲ್ಲಿ ಕಾಮನಬಿಲ್ಲಿನ ಏಳು ಬಣ್ಣಗಳು ಯಾವ ರೀತಿ ಜಗತ್ತಿನ ಕತ್ತಲನ್ನು ಹೋಗಲಾಡಿಸಿ, ಬೆಳಕಿನಿಂದ ಬೆಳಗುತ್ತದೂ, ಅದೇ ರೀತಿ ಈ ಜರ್ನಲ್ ಹಾಗೂ ನಮ್ಮ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಬೆಳಗಲಿ ಎಂದು ಶುಭಹಾರೈಸಿದರು. ಜೊತೆಗೆ ಕಾನೂನು ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಬೆಳೆಸಿಕೊಳ್ಳುವತೆ ಕರೆ ನೀಡಿದ ಅವರು, ಕಠಿಣ ಪರಿಶ್ರಮದ ಮೂಲಕ ಜ್ಞಾನರ್ಜನೆಗೆ ಹೆಚ್ಚಿನ ಒತ್ತು ನೀಡಿದಾಗ ಗೆಲುವು ನಮ್ಮದಾಗುತ್ತದೆ ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಶಾಸಕಾಂಗ, ಕಾರ್ಯಾಂಗಕ್ಕಿಂತಲೂ ಜನತೆ ನ್ಯಾಯಾಂಗದ ಮೇಲೆ ಹೆಚ್ಚಿನ ವಿಶ್ವಾಸವಿರಿಸಿದ್ದು, ಜನರ ಸಂಕಷ್ಟಗಳಿಗೆ ಸ್ಪಂದಿಸಿ, ಅವರ ವಿಶ್ವಾಸವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನ್ಯಾಯಾಂಗದ ಭಾಗವಾಗಿರುವ ನ್ಯಾಯಾಮೂರ್ತಿಗಳಿಗಿದೆ. ಈ ಹುದ್ದೆಯೆಂದರೆ ಈ ದೇಶದಲ್ಲಿ ವಿಶಿಷ್ಟ ಗೌರವ ಹಾಗೂ ಅತ್ಯಂತ ಜವಾಬ್ದಾರಿಯುತ ಸ್ಥಾನವನ್ನು ಅಲಂಕರಿಸುವ ಒಂದು ವಿಶೇಷ ಹುದ್ದೆಯಾಗಿದೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಯೊಬ್ಬ ಅಂತಹ ಗೌರವಯುತ ಸ್ಥಾನವಾಗಿರುವ ರಾಜ್ಯದ ದೊಡ್ಡ ನ್ಯಾಯಕ್ಷೇತ್ರವಾಗಿರುವ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಗಳಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ವಿಚಾರವಾಗಿದೆ ಎಂದ ಅವರು, ನಮ್ಮ ಸಂಸ್ಥೆಯ ಪ್ರತಿಯೊಬ್ಬ ಕಾನೂನು ವಿದ್ಯಾರ್ಥಿಯು ಈ ರೀತಿಯ ಸಾಧನೆ ಮಾಡಬೇಕು ಎಂದರು.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿಭಾಗದ ನಿರ್ದೇಶಕರಾದ ಡಾ. ಬಿ.ಕೆ. ರವೀಂದ್ರ ಕಾರ್ಯಕ್ರಮದ ಕುರಿತು ಪ್ರಾಸ್ತವಿಕವಾಗಿ ಮಾತನಾಡಿ,
ಕಾನೂನು ಮಹಾವಿದ್ಯಾಲಯದ ಸಂಶೋಧನಾ ಜರ್ನಲ್ ‘ಲೀಗಲ್ ಸ್ಪೆಕ್ಟ್ರಂ’ ಕುರಿತು ವಿವರಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಶಶಿಧರ್ ಬಿ ಎನ್ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಚಾಲಕರಾದ ವಿಜಯನಾರಾಯಣ ಕೆ.ಎಂ. ಉಪಸ್ಥಿತರಿದ್ದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ. ಪಿ. ಸ್ವಾಗತಿಸಿ, ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕಿರಾದ ಶ್ರೀಮತಿ ಸಂಗೀತಾ ಎಸ್ ಎಂ ವಂದಿಸಿದರು. ಆಂಗ್ಲ ಭಾಷಾ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸಂಧ್ಯಾ ಪಿ.ಎಂ. ಕಾರ್ಯಕ್ರಮ ನಿರೂಪಿಸಿದರು.

ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನಾ ಕಾರ್ಯಕ್ರಮ
ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಯಾದ ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ರವರು ಸನ್ಮಾನ ನಡೆಸಿದರು.

ಶುಭಸ್ಮೃತಿ ಯೋಜನೆಯಡಿ ಗೌರವ ಸಮರ್ಪಣೆ
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ತಮ್ಮ ಶುಭದಿನಗಳ ಸಂಧರ್ಭದಲ್ಲಿ ನೆನಪಿನಾರ್ಥವಾಗಿ ಕೊಡುಗೆ ನೀಡುವ ಯೋಜನೆಯಾಗಿರುವ ‘ಶುಭಸ್ಮೃತಿ’ಯ ಪ್ರಯುಕ್ತ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಾಹನ ನಿಲ್ದಾಣವನ್ನು ನಿರ್ಮಿಸಿ ಕೊಟ್ಟ ಕಾನೂನು ವಿದ್ಯಾರ್ಥಿ ರೋನಾಲ್ಡ್ ಪ್ರಶಾಂತ್ ಡಿಸೋಜಾ ರವರನ್ನು ಗುರುತಿಸಿ ಗೌರವ ಸಮರ್ಪಣೆಯನ್ನು ಮಾಡಲಾಯಿತು.

LEAVE A REPLY

Please enter your comment!
Please enter your name here