ಉಪ್ಪಿನಂಗಡಿ: ಬೈಕ್ ಡಿಕ್ಕಿ- ಪಾದಚಾರಿ ಸಾವು

0

ಉಪ್ಪಿನಂಗಡಿ: ಇಲ್ಲಿನ ನೇತ್ರ್ರಾವತಿ ಸೇತುವೆ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸೆಲ್ವದಾರ್ ಫೆರ್ನಾಂಡೀಸ್ (63) ಎಂಬವರು ಸಾವನ್ನಪ್ಪಿ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜೂ.22ರಂದು ಸಂಭವಿಸಿದೆ.


ಮೃತ ವ್ಯಕ್ತಿ ಇಳಂತಿಲ ಗ್ರಾಮದ ಬನ್ನೆಂಗಳ ನಿವಾಸಿಯಾಗಿದ್ದು, ಕಾರ್ಯ ನಿಮಿತ್ತ ಉಪ್ಪಿನಂಗಡಿಯ ಎಚ್.ಎಂ. ಹಾಲ್ ಬಳಿ ಬಂದವರು ರಸ್ತೆಯ ಒಂದು ಪಾರ್ಶ್ವದಲ್ಲಿ ತನ್ನ ಓಮ್ನಿ ಕಾರನ್ನು ನಿಲ್ಲಿಸಿ ರಸ್ತೆಯ ಇನ್ನೊಂದು ಪಾರ್ಶ್ವಕ್ಕೆ ಹೋಗುವ ಸಲುವಾಗಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆಯಿತು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ, ಅಲ್ಲಿ ಅವರು ಮೃತಪಟ್ಟರು. ಘಟನೆಯಿಂದ ಬೈಕ್ ಸವಾರ ನಿತಿನ್ (23) ಎಂಬವರೂ ಗಂಭೀರವಾಗಿ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತಿದ್ದಾರೆ.

LEAVE A REPLY

Please enter your comment!
Please enter your name here