ಕೊಳ್ತಿಗೆ:ವ್ಯಕ್ತಿ ಆತ್ಮಹತ್ಯೆ

0

ಪುತ್ತೂರು: ಕೊಳ್ತಿಗೆ ಗ್ರಾಮದ ಸುತ್ತುಕೋಟೆ ದಿ.ವೆಂಕಪ್ಪ ನಾಯ್ಕರವರ ಮಗ ಸೀತಾರಾಮ(35ವ.)ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಜೂ.21ರಂದು ಬೆಳಿಗ್ಗೆ 9 ಗಂಟೆಯಿಂದ ಜೂ.22ರ ಬೆಳಿಗ್ಗೆ 7.15ರ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಹಿಂಬದಿಯಲ್ಲಿರುವ ಸರಕಾರಿ ಗೇರುಬೀಜದ ತೋಟದಲ್ಲಿನ ಮರದ ಕೊಂಬೆಗೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಅದ್ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಈ ಕೃತ್ಯ ಎಸಗಿಕೊಂಡಿದ್ದಾಗಿ ಮೃತರ ಅಣ್ಣ ಪದ್ಮನಾಭ ಎಂಬವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here