![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ನೂತನ ಕಾರ್ಯನಿರ್ವಾಹಕಾಧಿಕಾರಿಯಾಗಿ ಡಾ.ಆನಂದ್ ಕೆ. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.
2016ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಇವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿದ್ದರು. ಅದರ ಮೊದಲು ಗದಗ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದರು. ದ.ಕ.ಜಿ.ಪಂ.ಸಿಇಒ ಆಗಿದ್ದ ಡಾ.ಕುಮಾರ್ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿದ ಬಳಿಕ ತೆರವಾದ ಹುದ್ದೆಗೆ ಡಾ.ಆನಂದ್ ಅವರ ವರ್ಗಾವಣೆಯಾಗಿದ್ದು ಅವರು ಜೂ.30ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.