ಎಲ್ಲಾ ಪಂಚಾಯತ್‌ಗಳು ಯುಪಿಎ ಪಾವತಿಗೆ ಶಕ್ತ

0

ಭ್ರಷ್ಟಾಚಾರಕ್ಕೆ ತಡೆ
ಡಿಜಿಟಲ್ ವಹಿವಾಟು ಸಕ್ರಿಯದಿಂದ ಭ್ರಷ್ಟಾಚಾರ ತಡೆಗೆ ಸಹಾಯ ಮಾಡುತ್ತದೆ ಎಂದು ಪಂಚಾಯತ್ ರಾಜ್ ರಾಜ್ಯ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಹೇಳಿದ್ದಾರೆ.ಬಹುತೇಕ ಪಂಚಾಯಿತಿಗಳು ಈಗ ಡಿಜಿಟಲ್ ಪಾವತಿಯನ್ನು ಬಳಸುತ್ತಿವೆ.ಇದು ಭ್ರಷ್ಟಾಚಾರವನ್ನು ತಡೆಯಲು ಸಹಾಯ ಮಾಡುತ್ತದೆ,ಯೋಜನೆಯಿಂದ ಪಾವತಿಯವರೆಗೆ ಎಲ್ಲವೂ ಡಿಜಿಟಲ್ ರೂಪದಲ್ಲಿ ನಡೆಯುತ್ತಿದೆ ಎಂದು ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು: ಆಗಸ್ಟ್ 15ರಿಂದ ದೇಶದಾದ್ಯಂತ ಎಲ್ಲಾ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಕಾರ್ಯಗಳು ಮತ್ತು ಆದಾಯ ಸಂಗ್ರಹಣೆಗೆ ಕಡ್ಡಾಯವಾಗಿ ಡಿಜಿಟಲ್ ಪಾವತಿ ಬಳಸಲಿದ್ದು, ಯುಪಿಐ ಪಾವತಿಗೆ ಶಕ್ತ ಎಂದು ಘೋಷಿಸಲಾಗುವುದು ಎಂದು ಕೇಂದ್ರ ಪಂಚಾಯತ್‌ರಾಜ್ ಸಚಿವಾಲಯ ತಿಳಿಸಿದೆ.

ಈ ಸಂಬಂಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಸಚಿವಾಲಯ ಮುಖ್ಯಮಂತ್ರಿ, ಸಂಸದರು ಮತ್ತು ಶಾಸಕರಂತಹ ಗಣ್ಯರ ಸಮ್ಮುಖದಲ್ಲಿ ಯುಪಿಐ ಪಾವತಿ ಅನುಕೂಲವಿರುವ ಪಂಚಾಯತ್‌ಗಳೆಂದು ಘೋಷಿಸಬೇಕು ಮತ್ತು ಅವುಗಳನ್ನು ಉದ್ಘಾಟಿಸಬೇಕು ಎಂದು ತಿಳಿಸಿದೆ.

ಸುಮಾರು ಶೇ.98ರಷ್ಟು ಪಂಚಾಯತ್‌ಗಳು ಈಗಾಗಲೇ ಯುಪಿಐ ಆಧಾರಿತ ಪಾವತಿಗಳನ್ನು ಬಳಸಲು ಪ್ರಾರಂಭಿಸಿವೆ.ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆ(ಪಿಎಂಎಫ್ಎಸ್) ಮೂಲಕ ಸುಮಾರು 1.5 ಲಕ್ಷ ಕೋಟಿ ರೂ.ಪಾವತಿ ಮಾಡಲಾಗಿದೆ.ಪಂಚಾಯತ್‌ಗಳಲ್ಲಿ ಪಾವತಿಯನ್ನು ಈಗ ಡಿಜಿಟಲ್ ರೂಪದಲ್ಲಿ ಮಾಡಲಾಗುತ್ತದೆ.ಚೆಕ್ ಮತ್ತು ನಗದು ಪಾವತಿಯನ್ನು ಬಹುತೇಕ ನಿಲ್ಲಿಸಲಾಗಿದೆ ಎಂದು ಪಂಚಾಯತ್‌ರಾಜ್ ಸಚಿವಾಲಯದ ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಇದು ಈಗ ಬಹುತೇಕ ಸಾರ್ವತ್ರಿಕ ವ್ಯಾಪ್ತಿಯನ್ನು ಹೊಂದಿದೆ.ಜೂ.30 ರಂದು ಸೇವಾ ಪೂರೈಕೆದಾರರು ಮತ್ತು ಮಾರಾಟಗಾರರೊಂದಿಗೆ ಸಭೆ ನಡೆಸುವಂತೆ ಪಂಚಾಯತ್‌ಗಳಿಗೆ ತಿಳಿಸಲಾಗಿದೆ.ಯುಪಿಐ ಪ್ಲಾಟ್-ಫಾ‌ರ್ಮ್ ಗಳಾದ GPay, PhonePay, Paytm, BHIM, Mobikwik, WhatsApp Pay, Amazon Pays ಮತ್ತು Bharat Pe ನಿಂದ ಸಂಪರ್ಕಿತ ವ್ಯಕ್ತಿಗಳ ವಿವರಗಳೊಂದಿಗೆ ಪಟ್ಟಿಯನ್ನು ಸಚಿವಾಲಯವು ಹಂಚಿಕೊAಡಿದೆ.ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಜುಲೈ 15ರೊಳಗೆ ಪಂಚಾಯತ್‌ಗಳು ಸೂಕ್ತ ಸೇವಾ ಪೂರೈಕೆದಾರರನ್ನು ಆಯ್ಕೆ ಮಾಡಬೇಕು ಮತ್ತು ಜುಲೈ 30 ರೊಳಗೆ ಮಾರಾಟಗಾರರನ್ನು ಅಂತಿಮಗೊಳಿಸಬೇಕು.

LEAVE A REPLY

Please enter your comment!
Please enter your name here