ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ಶ್ರೀಗಳ ಪಾದಪೂಜೆ

0

ವಿಟ್ಲ: ಗುರು ಪೂರ್ಣಿಮೆಯ ಅಂಗವಾಗಿ ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರಿಗೆ ಭಕ್ತಾಧಿಗಳ ವತಿಯಿಂದ ಪಾದ ಪೂಜೆ ನಡೆಯಿತು.


ಈ ಸಂದರ್ಭದಲ್ಲಿ ಕೈಯ್ಯೂರು ನಾರಾಯಣ ಭಟ್ ರವರು ಗುರು ತತ್ವದ ಬಗ್ಗೆ ಉಪನ್ಯಾಸ ನೀಡಿದರು. ನಿವೃತ್ತ ಪ್ರಾಂಶುಪಾಲರಾದ ಮಹಾಲಿಂಗ ಭಟ್ ಬಿಲ್ಲಂಪದವು, ಟ್ರಸ್ಟ್ ನ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು, ಮನೋಜ್ ಕುಮಾರ್ ಬನಾರಿ, ಜಯರಾಮ ಕುಂಟ್ರಕಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಟ್ರಸ್ಟ್ ನ ಕಾರ್ಯದರ್ಶಿ ಚಂದ್ರಶೇಖರ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು. ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಊರಪರವೂರ ನೂರಾರು ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here