ಅರ್ಹ ಕುಟುಂಬಗಳಿಗೆ ರೇಷನ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೆ.ಎಂ ಹನೀಫ್ ರೆಂಜಲಾಡಿಯವರಿಂದ ಶಾಸಕರಿಗೆ ಮನವಿ

0

ಪುತ್ತೂರು: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸರ್ವೆ ಕಾಂಗ್ರೆಸ್ ಬೂತ್ ಸಮಿತಿ (192) ಪ್ರದಾನ ಕಾರ್ಯದರ್ಶಿ ಕೆ.ಎಂ ಹನೀಫ್ ರೆಂಜಲಾಡಿ ಅವರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈಗಾಗಲೇ ರಾಜ್ಯ ಸರಕಾರ ವಿವಿಧ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಅದರಲ್ಲಿ ಅಕ್ಕಿ ಕೂಡಾ ಒಂದು. ನೂರಾರು ಅರ್ಹ ಕುಟುಂಬಗಳು ಬಿಪಿಎಲ್ ಪಡಿತ ಚೀಟಿ ಇಲ್ಲದೇ ತೊಂದರೆಗೆ ಸಿಲುಕಿದ್ದು ಬಿಪಿಎಲ್ ಕಾರ್ಡ್ ಮಾಡಿಸಲು ಕಳೆದ ಆರು ತಿಂಗಳಿನಿಂದ ಅವಕಾಶವೇ ಇಲ್ಲದಂತಾಗಿದೆ. ಹಾಗಾಗಿ ಅರ್ಹ ಫಲಾನುಭವಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲು ಸರಕಾರಿ ಮಟ್ಟದಲ್ಲಿ ತಾವು ಪ್ರಯತ್ನಿಸಿ ನಮ್ಮ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿರುವ ಮನವಿಯನ್ನು ಶಾಸಕರಿಗೆ ನೀಡಲಾಯಿತು. ಈ ಬಗ್ಗೆ ತಾನು ಪ್ರಯತ್ನಿಸುವುದಾಗಿ ಶಾಸಕರು ಇದೇ ವೇಳೆ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here