ಜು.15:ಪುತ್ತೂರು ಬಿಲ್ಲವ ನಗರ ಸಮಿತಿಯಿಂದ ಎಸೆಸ್ಸೆಲ್ಸಿ,ಪಿಯುಸಿ ಡಿಸ್ಟಿಂಕ್ಷನ್ ವಿದ್ಯಾರ್ಥಿಗಳಿಗೆ ಅಭಿನಂದನೆ-ಅರ್ಜಿ ಪಡೆಯಲು ಸೂಚನೆ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಬಿಲ್ಲವ ನಗರ ಸಮಿತಿಯ ಆಶ್ರಯದಲ್ಲಿ ಜು.15 ರಂದು ಪುತ್ತೂರು-ಬಪ್ಪಳಿಗೆ ಬಿಲ್ಲವ ಸಂಘದ ಸಭಾಭವನದಲ್ಲಿ ನಡೆಯುವ ವಾರ್ಷಿಕ ಮಹಾಸಭೆ, ಉಚಿತ ಪುಸ್ತಕ ವಿತರಣೆ ಹಾಗೂ ಎಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.


ಪುತ್ತೂರು ನಗರಸಭೆ ವ್ಯಾಪ್ತಿಗೊಳಪಟ್ಟ ಬಿಲ್ಲವ ಸಮುದಾಯದ ಎಸೆಸ್ಸೆಲ್ಸಿ ಹಾಗೂ ಪಿಯುಸಿ(ಶೇ.85)ಯಲ್ಲಿ ಡಿಸ್ಟಿಂಕ್ಷನ್ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಲಿದ್ದು, ಡಿಸ್ಟಿಂಕ್ಷನ್ ವಿಜೇತ ವಿದ್ಯಾರ್ಥಿಗಳು ಜು.14ರ ಒಳಗಾಗಿ ಸಂಘದ ಕಛೇರಿಯಲ್ಲಿ ಅರ್ಜಿ ಫಾರಂ ಪಡೆದುಕೊಂಡು ಸಹಕರಿಸಬೇಕಾಗಿ ಬಿಲ್ಲವ ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here