ಗುಡ್ಡ ಕುಸಿದು ಮಹಿಳೆ ಮೃತ್ಯು – ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಘೋಷಿಸಿದ ಜಿಲ್ಲಾಧಿಕಾರಿ

0

ಮಂಗಳೂರು?ಪುತ್ತೂರು (ನಂದಾವರ): ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಮನೆಯ ಹಿಂಬದಿ ಗುಡ್ಡ ಜರಿದು ಮಹಿಳೆಯೋರ್ವರು ಮೃತಪಟ್ಟ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಅವಘಡ ಸಂಭವಿಸಿದ ಕುಟುಂಬಕ್ಕೆ ರೂ. ಐದು ಲಕ್ಷ ಪರಿಹಾರ ಮತ್ತು ಮನೆ ರಿಪೇರಿಗೆ 1.20 ಲಕ್ಷ ರೂಪಾಯಿ ಪರಿಹಾರವನ್ನು ಸರಕಾರದಿಂದ ನೀಡುವ ಭರವಸೆ ನೀಡಿದರು.


ಜೊತೆಗೆ ತಾಲೂಕಿನಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ತಾಲುಕಿನ ಅಧಿಕಾರಿಗಳಿಗೆ ರುಉಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಶಿಲ್ದಾರ್ ಎಸ್.ವಿ.ಕೂಡಲಗಿ,ತಾ.ಪಂ.ಇ.ಒ.ರಾಜಣ್ಣ ,ಪಿಡಿಒ ಲಕ್ಷಣ್ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here