ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ -ಬಾಯಿಗೆ ಕಪ್ಪು ಪಟ್ಟಿ ಸುತ್ತಿ ಮೌನ ಪ್ರತಿಭಟನೆ ಮಧ್ಯಾಹ್ನ ಸಮಾಪ್ತಿ

0

ಪುತ್ತೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನೂರ್ಜಿತ ಗೊಳಿಸಲು ಹುನ್ನಾರ ನಡೆಯುತ್ತಿದೆ ಎಂದು ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪುತ್ತೂರು ಗಾಂಧಿಕಟ್ಟೆ ಎದುರು ಒಂದು ದಿನ ಮೌನ ಪ್ರತಿಭಟನೆ ಜು.12ರಂದು ಬೆಳಗ್ಗೆನಿಂದ ಮಧ್ಯಾಹ್ನದ ತನಕ ನಡೆಯಿತು.

ಕಾಂಗ್ರೆಸ್ ನಾಯಕರು ಬಾಯಿಗೆ ಬಟ್ಟೆ ಸುತ್ತಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸಂದರ್ಭ ಕಾಂಗ್ರೆಸ್‌ನ ಹಲವಾರು ಮುಖಂಡರು, ಕಾರ್ಯಕರ್ತರು ಆಗಮಿಸಿ ಭಾಗವಹಿಸಿ ಕೇಂದ್ರ ಸರಕಾರದ ಗಮನ ಸೆಳೆಯುವ ಕಾರ್ಯಕ್ರಮ ನಡೆಸಿದರು. ಮಧ್ಯಾಹ್ನ ವೇಳೆ ಪ್ರತಿಭಟನೆಯನ್ನು ಸಮಾಪ್ತಿಗೊಳಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here